ಬ್ರೇಕಿಂಗ್ ನ್ಯೂಸ್
20-10-25 06:58 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ 33,000 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ಬಿಲ್ ಬಾಕಿಯಾಗಿದ್ದು, ತಕ್ಷಣವೇ ಪಾವತಿಸಬೇಕು. ಇಲ್ಲದಿದ್ದರೆ ಡಿಸೆಂಬರ್ ಮೊದಲ ವಾರದಿಂದ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್, "ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ನಾವು ಹಣ ಬಿಡುಗಡೆಗೆ ಕೇಳುತ್ತಿದ್ದೇವೆ. ಮುಖ್ಯಮಂತ್ರಿಗಳನ್ನು 2 - 3 ಬಾರಿ ಭೇಟಿ ಆಗಿದ್ದೇವೆ. ಅವರು ಭರವಸೆ ನೀಡುತ್ತಾರೆ, ಆದರೆ ಹಣ ನೀಡುವುದಿಲ್ಲ. ಕೇವಲ ಶೇ.10 - 15ರಷ್ಟು ಹಣವನ್ನು ಮಾತ್ರ ಪಾವತಿಸುತ್ತಿದ್ದಾರೆ. ನಾವು ನವೆಂಬರ್ ಅಂತ್ಯದ ವರೆಗೆ ಕಾಯುತ್ತೇವೆ, ಆನಂತರ ಪ್ರತಿಭಟನೆ ನಡೆಸಿ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೀಪಾವಳಿ ಹಬ್ಬದ ವರೆಗೆ ಕಾಯುವಂತೆ ಹೇಳಿದೆ ಎಂದು ಹೇಳಿದರು. ಮಂಜುನಾಥ್ ಅವರ ಪ್ರಕಾರ, ಮೇ 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ 52,000 ಕೋಟಿ ರೂ. ಬಾಕಿ ಇತ್ತು. ಈಗ ಎಂಟು ಇಲಾಖೆಗಳಿಂದ ಸುಮಾರು 33,000 ಕೋಟಿ ರೂ. ಬಾಕಿ ಇದೆ. ಸಮಾಜ ಕಲ್ಯಾಣ ಇಲಾಖೆ ಹೊರತುಪಡಿಸಿ, ಬೇರೆ ಯಾವ ಇಲಾಖೆಯೂ ಹಿರಿಯ ಗುತ್ತಿಗೆದಾರರಿಗೆ ಆದ್ಯತೆ ನೀಡುತ್ತಿಲ್ಲ ಎಂದು ಅವರು ಹೇಳಿದರು. ನಗರ ಅಭಿವೃದ್ಧಿ ಇಲಾಖೆಯು 10 ನಗರ ಮಹಾನಗರ ಪಾಲಿಕೆಗಳಲ್ಲಿ ನೀಡುತ್ತಿರುವ ಪ್ಯಾಕೇಜ್ ಟೆಂಡರ್ಗಳು ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಅನ್ಯಾಯ ಮಾಡುತ್ತಿವೆ. ಸಚಿವರಾದ ಬೈರತಿ ಸುರೇಶ್ ಅವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಹೇಳಿದರು. ಸಿದ್ದರಾಮಯ್ಯನವರು ಪ್ಯಾಕೇಜ್ ಟೆಂಡರ್ಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಅತಿ ಹೆಚ್ಚು ಅಂದರೆ 12,000 ಕೋಟಿ ರೂಪಾಯಿ ಡಿಕೆ ಶಿವಕುಮಾರ್ ನಿರ್ವಹಿಸುತ್ತಿರುವ ಮಹಾ ನೀರಾವರಿ ಇಲಾಖೆಗೆ ಸೇರಿದೆ. ನಂತರ, ಪಿಡಬ್ಲ್ಯೂಡಿ ಇಲಾಖೆಯಿಂದ 9,000 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 3,600 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ 3,200 ಕೋಟಿ, ನಗರ ಅಭಿವೃದ್ಧಿ ಇಲಾಖೆಯಿಂದ 2,000 ಕೋಟಿ, ವಸತಿ ಇಲಾಖೆಯಿಂದ 1,500 ಕೋಟಿ, ಕಾರ್ಮಿಕ ಇಲಾಖೆಯಿಂದ 800 ಕೋಟಿ ರೂಪಾಯಿಗಳು ಬಾಕಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.
The Karnataka State Contractors’ Association has warned of statewide protests starting in early December if the state government fails to clear pending bills totaling ₹33,000 crore across various departments. Association president R. Manjunath said despite repeated assurances from Chief Minister Siddaramaiah, only 10–15% of payments have been released so far.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm