Dharmasthala Case, CM Siddaramaiah: ಧರ್ಮಸ್ಥಳ ಅಸಹಜ ಸಾವು ಪ್ರಕರಣ ; ಎಲ್ಲ ಕೇಸುಗಳನ್ನೂ ಎಸ್ಐಟಿ ವ್ಯಾಪ್ತಿಗೆ ತರಬೇಕು, ತಾರ್ಕಿಕ ಅಂತ್ಯ ಸಿಗೋ ವರೆಗೂ ಎಸ್ಐಟಿ ಮುಂದುವರಿಸಲು ಸಿಎಂ ಸಿದ್ದರಾಮಯ್ಯಗೆ ಮನವಿ 

21-10-25 09:45 pm       Bangalore Correspondent   ಕರ್ನಾಟಕ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. 

ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. 

'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್‌ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.

Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).