ಬ್ರೇಕಿಂಗ್ ನ್ಯೂಸ್
22-10-25 08:12 pm HK News Desk ಕರ್ನಾಟಕ
ಬೆಳಗಾವಿ, ಅ.22 : ರಾಜ್ಯ ಸರ್ಕಾರದ ಹಿರಿಯ ಸಚಿವ ಸತೀಶ್ ಜಾರಕಿಹೊಳಿಯವರೇ ಮುಂದಿನ ಸಿಎಂ ಆಗುತ್ತಾರೆಯೇ? ಈ ರೀತಿಯ ಅನುಮಾನದ ಪ್ರಶ್ನೆ ಮೂಡಲು ಕಾರಣವಾಗಿದ್ದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆ.
‘ನಮ್ಮ ತಂದೆಯವರು ತಮ್ಮ ರಾಜಕೀಯ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ಧಾಂತದ ನಾಯಕರು ಸಿಎಂ ಸ್ಥಾನಕ್ಕೆ ಬರಬೇಕಾಗಿದೆ. ಸತೀಶ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸ್ತಾರೆ ಎಂಬ ವಿಶ್ವಾಸ ಇದೆ. ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ಹೇಳಿದ್ದು ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಯಬಾಗದಲ್ಲಿ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ.
ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿರುವಾಗಲೇ, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುತ್ತಲೇ ಬಂದಿದ್ದ ಪುತ್ರ ಯತೀಂದ್ರ ದಿಢೀರ್ ಆಗಿ ಮಾತು ಬದಲಿಸಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ಮುನ್ಸೂಚನೆ ನೀಡುವ ರೀತಿ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿದೆ, ವೈಚಾರಿಕ ನಿಲುವಿನ ಮತ್ತೊಬ್ಬ ನಾಯಕನ ಅಗತ್ಯವಿದೆ, ಆ ಜಾಗಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಾರಕಿಹೊಳಿ ಮುಂದಿನ ಸಿಎಂ ಸ್ಥಾನಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ವಾದ ಮುಂದಿಟ್ಟಿದ್ದಾರೆ.
ಮೊನ್ನೆಯಷ್ಟೇ ಬೆಳಗಾವಿ ಡಿಸಿಸಿ ಬ್ಯಾಂಕ್ ಚುಕ್ಕಾಣಿಯನ್ನು ಭಾರೀ ಪೈಪೋಟಿ ಇದ್ದರೂ ಸತೀಶ್ ಜಾರಕಿಹೊಳಿ ಬಣ ಬಗಲಿಗೆ ಹಾಕಿಕೊಂಡಿತ್ತು. ಡಿಸಿಸಿ ಚುನಾವಣೆ ವಿಷಯದಲ್ಲಿ ಜಾರಕಿಹೊಳಿ ಕುಟುಂಬವೂ ಒಂದಾಗಿತ್ತು. ಇದೀಗ ಸಿಎಂ ಸ್ಥಾನಕ್ಕು ಜಾರಕಿಹೊಳಿ ಕುಟುಂಬವೇ ಟವೆಲ್ ಹಾಕುತ್ತಾ ಎನ್ನುವ ಅನುಮಾನ ಮೂಡಿದೆ. ಡಿಕೆಶಿ ಸಿಎಂ ಆಗುತ್ತಾರೆಂದು ಅವರ ಪರವಾಗಿರುವ ಶಾಸಕರು ಹೇಳುತ್ತ ಬಂದರೂ ಹಿರಿಯ ಸಚಿವರು ವಿರೋಧ ನಿಲುವು ಹೊಂದಿದ್ದಾರೆ. ಇದರ ನಡುವಲ್ಲೇ ಜಾರಕಿಹೊಳಿ ಸಿಎಂ ಸ್ಥಾನಕ್ಕೆ ಅರ್ಹ ವ್ಯಕ್ತಿಯೆಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರನೇ ಬ್ಯಾಟಿಂಗ್ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
In a statement that has sparked major political speculation, Karnataka CM Siddaramaiah’s son, Yathindra Siddaramaiah, has said that senior minister Satish Jarkiholi is a suitable and deserving candidate for the Chief Minister’s post.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm