ಬ್ರೇಕಿಂಗ್ ನ್ಯೂಸ್
22-10-25 08:12 pm HK News Desk ಕರ್ನಾಟಕ
ಬೆಳಗಾವಿ, ಅ.22 : ರಾಜ್ಯ ಸರ್ಕಾರದ ಹಿರಿಯ ಸಚಿವ ಸತೀಶ್ ಜಾರಕಿಹೊಳಿಯವರೇ ಮುಂದಿನ ಸಿಎಂ ಆಗುತ್ತಾರೆಯೇ? ಈ ರೀತಿಯ ಅನುಮಾನದ ಪ್ರಶ್ನೆ ಮೂಡಲು ಕಾರಣವಾಗಿದ್ದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆ.
‘ನಮ್ಮ ತಂದೆಯವರು ತಮ್ಮ ರಾಜಕೀಯ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ಧಾಂತದ ನಾಯಕರು ಸಿಎಂ ಸ್ಥಾನಕ್ಕೆ ಬರಬೇಕಾಗಿದೆ. ಸತೀಶ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸ್ತಾರೆ ಎಂಬ ವಿಶ್ವಾಸ ಇದೆ. ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ಹೇಳಿದ್ದು ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಯಬಾಗದಲ್ಲಿ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ.
ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿರುವಾಗಲೇ, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುತ್ತಲೇ ಬಂದಿದ್ದ ಪುತ್ರ ಯತೀಂದ್ರ ದಿಢೀರ್ ಆಗಿ ಮಾತು ಬದಲಿಸಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ಮುನ್ಸೂಚನೆ ನೀಡುವ ರೀತಿ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿದೆ, ವೈಚಾರಿಕ ನಿಲುವಿನ ಮತ್ತೊಬ್ಬ ನಾಯಕನ ಅಗತ್ಯವಿದೆ, ಆ ಜಾಗಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಾರಕಿಹೊಳಿ ಮುಂದಿನ ಸಿಎಂ ಸ್ಥಾನಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ವಾದ ಮುಂದಿಟ್ಟಿದ್ದಾರೆ.
ಮೊನ್ನೆಯಷ್ಟೇ ಬೆಳಗಾವಿ ಡಿಸಿಸಿ ಬ್ಯಾಂಕ್ ಚುಕ್ಕಾಣಿಯನ್ನು ಭಾರೀ ಪೈಪೋಟಿ ಇದ್ದರೂ ಸತೀಶ್ ಜಾರಕಿಹೊಳಿ ಬಣ ಬಗಲಿಗೆ ಹಾಕಿಕೊಂಡಿತ್ತು. ಡಿಸಿಸಿ ಚುನಾವಣೆ ವಿಷಯದಲ್ಲಿ ಜಾರಕಿಹೊಳಿ ಕುಟುಂಬವೂ ಒಂದಾಗಿತ್ತು. ಇದೀಗ ಸಿಎಂ ಸ್ಥಾನಕ್ಕು ಜಾರಕಿಹೊಳಿ ಕುಟುಂಬವೇ ಟವೆಲ್ ಹಾಕುತ್ತಾ ಎನ್ನುವ ಅನುಮಾನ ಮೂಡಿದೆ. ಡಿಕೆಶಿ ಸಿಎಂ ಆಗುತ್ತಾರೆಂದು ಅವರ ಪರವಾಗಿರುವ ಶಾಸಕರು ಹೇಳುತ್ತ ಬಂದರೂ ಹಿರಿಯ ಸಚಿವರು ವಿರೋಧ ನಿಲುವು ಹೊಂದಿದ್ದಾರೆ. ಇದರ ನಡುವಲ್ಲೇ ಜಾರಕಿಹೊಳಿ ಸಿಎಂ ಸ್ಥಾನಕ್ಕೆ ಅರ್ಹ ವ್ಯಕ್ತಿಯೆಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರನೇ ಬ್ಯಾಟಿಂಗ್ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
In a statement that has sparked major political speculation, Karnataka CM Siddaramaiah’s son, Yathindra Siddaramaiah, has said that senior minister Satish Jarkiholi is a suitable and deserving candidate for the Chief Minister’s post.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm