ಬ್ರೇಕಿಂಗ್ ನ್ಯೂಸ್
24-10-25 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.24 : ಭಾರೀ ಕುತೂಹಲ ಮೂಡಿಸಿದ್ದ ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟ ಪ್ರಕರಣದ ತನಿಖಾ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರಕಾರ ಸೂಚನೆ ನೀಡಿದೆ.
ಸರಕಾರದ ಸೂಚನೆ ಆಧರಿಸಿ ಮುಂದಿನ ವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಎಸ್ಐಟಿ ತಯಾರಿ ನಡೆಸಿದೆ. ಹೀಗಾಗಿ ಇದೇ ತಿಂಗಳ ಅಂತ್ಯದೊಳಗೆ ದೇಶಾದ್ಯಂತ ಸುದ್ದಿಯಾಗಿದ್ದ ಧರ್ಮಸ್ಥಳ ಪ್ರಕರಣದ ತನಿಖಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಧರ್ಮಸ್ಥಳ ಕ್ಷೇತ್ರದಲ್ಲಿ ಅಸಹಜ ಸಾವಾಗಿದೆ, ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಆರೋಪದ ಕುರಿತಂತೆ ದೂರುದಾರರ ಮನವಿ ಆಧರಿಸಿ ರಾಜ್ಯ ಸರಕಾರ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು. ಎಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನುರಿತ ಅಧಿಕಾರಿಗಳನ್ನು ಒಳಗೊಂಡ ತಂಡ ನೇಮಿಸಲಾಗಿತ್ತು. ದೂರುದಾರ ಚಿನ್ನಯ್ಯ ತೋರಿಸಿದ ಜಾಗದಲ್ಲಿ 15ಕ್ಕೂ ಹೆಚ್ಚು ಕಡೆ ಅಗೆದು ಶವ ಶೋಧ ನಡೆಸಲಾಗಿತ್ತು. ಆದರೆ ಹೇಳಿಕೊಂಡ ರೀತಿಯಲ್ಲಿ ಸಾಕ್ಷ್ಯ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ದೂರುದಾರ ಮತ್ತು ಜೊತೆಗಿದ್ದವರನ್ನು ಪಿತೂರಿದಾರರು ಎಂದು ತೋರಿಸಿ ಪ್ರತ್ಯೇಕ ಎಫ್ಐಆರ್ ಮಾಡಲಾಗಿತ್ತು. ಆನಂತರ ಚಿನ್ನಯ್ಯ ಕೋರ್ಟಿಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದು, ಪಿತೂರಿ ಬಗ್ಗೆಯೂ ಹೇಳಿಕೆ ನೀಡಿದ್ದಾನೆ ಎನ್ನಲಾಗಿತ್ತು. ಆತನ ಪತ್ನಿ, ಸೋದರಿಯನ್ನೂ ತನಿಖಾ ತಂಡ ವಿಚಾರಣೆ ನಡೆಸಿತ್ತು.
ಸದ್ಯಕ್ಕೆ ಮೂರು ತಿಂಗಳಿನಿಂದ ನಡೆದ ತನಿಖೆ ಹಾಗೂ ಸಾಕ್ಷ್ಯಗಳ ಸಂಗ್ರಹ ಕಾರ್ಯ ಬಹುತೇಕ ಅಂತಿಮಗೊಂಡಿದೆ ಎನ್ನಲಾಗುತ್ತಿದ್ದು ತನಿಖೆಯನ್ನು ಕೊನೆಗೊಳಿಸುವ ಬಗ್ಗೆ ಮಾತು ಕೇಳಿಬಂದಿತ್ತು. ಆದರೆ ಹಳೆ ಪ್ರಕರಣಗಳನ್ನು ತನಿಖೆ ನಡೆಸಬೇಕು ಎನ್ನುವ ಆಗ್ರಹದ ಬಗ್ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿಲ್ಲ ಎನ್ನಲಾಗಿದೆ. ಈವರೆಗಿನ ತನಿಖಾ ಪ್ರಕ್ರಿಯೆ ಬಗ್ಗೆ ಎಸ್ಐಟಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಇದರ ನಡುವೆಯೇ ದೇಶ- ವಿದೇಶದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಪ್ರಕರಣದ ತನಿಖೆಯನ್ನು ತುರ್ತಾಗಿ ಮುಗಿಸುವಂತೆ ಸರ್ಕಾರದ ಕಡೆಯಿಂದ ಸೂಚನೆ ನೀಡಿರುವುದು ಕುತೂಹಲಕ್ಕೀಡು ಮಾಡಿದೆ.
The Karnataka government has directed the Special Investigation Team (SIT) to complete the probe into the sensational Dharmasthala buried-body case by the end of this month. Acting on the directive, the SIT—headed by ADGP Pranav Mohanty—is preparing to submit its final report to the court next week.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am