ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am