ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm