ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm