ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm