ಬ್ರೇಕಿಂಗ್ ನ್ಯೂಸ್
27-10-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಅ.27 : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ತೆರಳಿದ್ದರು. ಆದರೆ, ದೆಹಲಿಯಲ್ಲಿ ಡಿಕೆಶಿಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅವರು ಬರಿಗೈಲಿ ವಾಪಸಾಗಿದ್ದಾರೆ.
ನವೆಂಬರ್ ಕ್ರಾಂತಿ ವದಂತಿಗೆ ಪೂರಕವಾಗಿ ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಉತ್ತರಾಧಿಕಾರಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎಂಬಮದು ಸ್ಫೋಟಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಚರ್ಚೆ, ವಿವಾದ ಎದ್ದಿರುವಾಗಲೇ ಭಾನುವಾರ ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರು. ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಕೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಡಿಕೆ ಭೇಟಿಗೆ ಸಿಗದೆ ರಾಹುಲ್ ಭೇಟಿ ತಪ್ಪಿಸಿದ್ದಾರೆ.
ರಾಹುಲ್ ಗಾಂಧಿ ಬಿಹಾರ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆಂಬ ನೆಪದಲ್ಲಿ ಡಿಕೆಶಿ ಭೇಟಿ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಹೊರಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೂ ದೆಹಲಿಯಲ್ಲಿ ಇಲ್ಲವೆಂದು ಹೇಳಿ ಡಿಕೆ ಭೇಟಿಯಿಂದ ದೂರ ಸರಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಮತ್ತೆ ನವೆಂಬರ್ 11ಕ್ಕೆ ಡಿಕೆಶಿ ದೆಹಲಿ ಭೇಟಿ ನೀಡಲಿದ್ದಾರೆಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು ಡಿಸಿಎಂ ಡಿಕೆಶಿ ಪರ ಮಾತಾಡೊದ್ರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯರ ಪರವೂ ಶಾಸಕರು ಮಾತಾಡ್ತಾರೆ. ಶಾಸಕರು ಗೆದ್ದು ಬಂದಿರುತ್ತಾರೆ, ಅವರ ಅಭಿಪ್ರಾಯಕ್ಕೂ ಬೆಲೆ ಇದೆ ಎಂದು ಸಮರ್ಥಿಸಿಕೊಂಡರು. ಸಿಎಂ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ, ಹೈಕಮಾಂಡ್ ಅಭಿಪ್ರಾಯವೂ ಮುಖ್ಯ. ತೀರ್ಮಾನ ತೆಗೆದುಕೊಳ್ಳುವುದು ಹೈಕಮಾಂಡ್. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಆಧಾರ ಸ್ತಂಭ. ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಇದ್ದೇ ಇರುತ್ತದೆ ಎಂದರು.
As political circles buzz with talk of a possible change in leadership in Karnataka, Deputy Chief Minister D.K. Shivakumar’s sudden Delhi visit has drawn attention — but ended without any significant outcome.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm