ಬ್ರೇಕಿಂಗ್ ನ್ಯೂಸ್
28-10-25 10:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯ ಪೊಲೀಸ್ ಸಿಬ್ಬಂದಿಗೆ ದೇವರಾಜ ಅರಸು ಕಾಲದಲ್ಲಿ ನೀಡಲಾಗಿದ್ದ ಸ್ಲೋಚ್ ಮಾದರಿ ಕ್ಯಾಪ್ ಗಳನ್ನು ಬದಲಿಸಲಾಗಿದ್ದು ತೆಲಂಗಾಣ ಮಾದರಿಯಲ್ಲಿ ಬ್ಲೂ ಕ್ಯಾಪ್ ಗಳನ್ನು ವಿತರಣೆ ನೀಡಲಾಗಿದೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೊಸ ಕ್ಯಾಪ್ಗಳ ವಿತರಣೆ ಮಾಡಿದರು.
ಕಳೆದ ಜೂನ್ ತಿಂಗಳಲ್ಲಿ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ ಹೊಸ ಕ್ಯಾಪ್ ವಿತರಣೆಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಬಳಿಕ ಹಲವು ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಇರುವ ಕ್ಯಾಪ್ ಪರಿಶೀಲನೆ ನಡೆಸಲಾಗಿತ್ತು. ಕೊನೆಗೆ ತೆಲಂಗಾಣ ಪೊಲೀಸರು ಧರಿಸುತ್ತಿರುವ ತೆಳುವಾದ ಬ್ಲೂ ಪೀಕ್ ಕ್ಯಾಪ್ ಅನ್ನು ಆಯ್ಕೆ ಮಾಡಿದ್ದು ಇದೀಗ ವಿತರಣೆ ಮಾಡಲಾಗಿದೆ.






ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ಇವತ್ತು ಪೊಲೀಸ್ ಇಲಾಖೆಯಲ್ಲಿ ಹೊಸ ಹೆಜ್ಜೆ ಇಡುತ್ತಿದ್ದೇವೆ. ಬ್ರಿಟಿಷರ ಕಾಲದಲ್ಲಿ ಪೊಲೀಸರಿಗೆ ನೀಡುತ್ತಿದ್ದ ಸಮವಸ್ತ್ರ ಮತ್ತು ಕ್ಯಾಪ್ ಗಳನ್ನು ಬದಲಾವಣೆ ಮಾಡಲಾಗಿದೆ. ಬ್ರಿಟಿಷ್ ಕಾಲದಲ್ಲಿ ಸ್ಲೋಪ್ ಟೋಪಿಗಳನ್ನು ಪೊಲೀಸ್ ಸಿಬ್ಬಂದಿ ಹಾಕುತ್ತಿದ್ದರು. ದೇವರಾಜ್ ಅರಸು ಸಿಎಂ ಆಗಿದ್ದಾಗ ನಮ್ಮ ಪೊಲೀಸ್ ಸಿಬ್ಬಂದಿಗೆ ಖಾಕಿ ಕ್ಯಾಪ್ ಹಾಕಿಸಿದ್ದರು. ಅಲ್ಲಿಂದ ಇಲ್ಲಿವರೆಗೆ ಅದನ್ನು ಹಾಕಿಕೊಳ್ಳುತ್ತಾ ಬಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಇದನ್ನು ಬದಲಾಯಿಸಲು ಇಲಾಖೆಯಿಂದ ಬೇಡಿಕೆ ಬಂದಿತ್ತು.
ಮಳೆಯಲ್ಲಿ ನೆನೆದರೆ ಖಾಕಿ ಕ್ಯಾಪ್ ಹೆಚ್ಚು ತೂಗುವುದರ ಜೊತೆಗೆ ಧರಿಸಲು ಕಷ್ಟ ಆಗುತ್ತದೆ. ನೋಡೋದಕ್ಕೂ ಚೆನ್ನಾಗಿಲ್ಲ ಎಂಬ ಒತ್ತಾಯವಿತ್ತು. ಹಿಂದೆ ಗೃಹ ಸಚಿವನಾಗಿದ್ದಾಗ ಕ್ಯಾಪ್ ಬದಲಾವಣೆ ಮಾಡುವ ಚಿಂತನೆ ಮಾಡಲಾಗಿತ್ತು. ಕೆಲವು ಕಾರಣಗಳಿಂದ ಬದಲಾವಣೆ ಮಾಡೋಕೆ ಆಗಿರಲಿಲ್ಲ. ಈಗ ಸಿಎಂ ಅವರೇ ಬ್ಲೂ ಕ್ಯಾಪ್ ಆಯ್ಕೆ ಮಾಡಿದ್ದು ಇಡೀ ರಾಜ್ಯದಲ್ಲಿ ವಿತರಣೆಗೆ ಅನುಮತಿ ನೀಡಿದ್ದಾರೆ ಎಂದರು.
The slouch-style caps introduced during the tenure of Devaraj Urs have now been replaced, and new blue caps, modeled after those worn by Telangana police, have been distributed to Karnataka police personnel.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm