ಬ್ರೇಕಿಂಗ್ ನ್ಯೂಸ್
04-11-25 04:38 pm Bangalore Correspondent ಕರ್ನಾಟಕ
ಬೆಂಗಳೂರು, ನ.4 : ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ (79) ನಿಧನ ಹೊಂದಿದ್ದಾರೆ.
ಹೆಚ್.ವೈ. ಮೇಟಿ ( ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಮೇಟಿ 2018ರ ಚುನಾವಣೆಯಲ್ಲಿ ಸೋತಿದ್ದರು. 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಈ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಗೆದ್ದಿದ್ದರು. ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಹುಟ್ಟೂರು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಬುಧವಾರ(ನಾಳೆ) ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
Senior Congress leader and former Karnataka minister H.Y. Meti (79) passed away at a private hospital in Jayanagar, Bengaluru, following a prolonged illness.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm