ಬ್ರೇಕಿಂಗ್ ನ್ಯೂಸ್
06-11-25 03:06 pm Bangalore Correspondent ಕರ್ನಾಟಕ
ಬೆಂಗಳೂರು, ನ.6 : ಹೆಸರಾಂತ ಪೋಷಕ ನಟ, ಕನ್ನಡ ಚಿತ್ರಗಳಲ್ಲಿ ವಿಲನ್ ಪಾತ್ರಗಳ ಮೂಲಕ ಮಿಂಚಿದ್ದ ಹಿರಿಯ ನಟ ಹರೀಶ್ ರಾಯ್(55) ಥೈರಾಯ್ಡ್ ಕ್ಯಾನ್ಸರ್ನಿಂದಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
90ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಉಡುಪಿ ಮೂಲದ ಹರೀಶ್ ರಾಯ್, ಶಿವರಾಜ್ ಕುಮಾರ್ ನಟನೆಯ ಓಂ ಚಿತ್ರದಲ್ಲಿ ಡಾನ್ ಆಗಿ, ಕೆಜಿಎಫ್ ಚಿತ್ರದಲ್ಲಿ ಚಾಚಾನಾಗಿ ಹೆಸರು ಮಾಡಿದ್ದರು. ಇತ್ತೀಚೆಗೆ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಶಿವಣ್ಣ, ಯಶ್ ಸೇರಿದಂತೆ ಅನೇಕರು ಆರ್ಥಿಕ ನೆರವು ನೀಡಿದ್ದರು. ಕೊನೆಗೂ ಕ್ಯಾನ್ಸರ್ ವಿರುದ್ಧ ಗೆಲ್ಲಲು ಹರೀಶ್ ರಾಯ್ ಅವರಿಗೆ ಸಾಧ್ಯವಾಗಲಿಲ್ಲ.


90 ರ ದಶಕದಲ್ಲಿ ಕನ್ನಡ, ತಮಿಳಿನ ಹಲವು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಹರೀಶ್ ರಾಯ್ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ, ಮೀಂದುಮ್ ಒರು ಕಾದಲ್ ಕಥೈ, ಜೋಡಿ ಹಕ್ಕಿ, ತಾಯವ್ವ, ಅಂಡರ್ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಹರೀಶ್ ರಾಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕ್ಯಾನ್ಸರ್ ವಿರುದ್ಧ ಹೋರಾಡಲು ಅವರಿಗೆ ದುಬಾರಿ ಬೆಲೆಯ 17 ಇಂಜೆಕ್ಷನ್ಗಳ ಅವಶ್ಯಕತೆ ಇತ್ತು. ಅದಕ್ಕಾಗಿ ಸುಮಾರು 70 ಲಕ್ಷಕ್ಕೂ ಅಧಿಕ ರೂ. ಅಗತ್ಯವಿತ್ತು ಎನ್ನಲಾಗಿತ್ತು. ಒಂದು ಇಂಜೆಕ್ಷನ್ ಬೆಲೆ 3.50 ಲಕ್ಷ ರೂ. ಎಂದೂ ಹೇಳಲಾಗಿತ್ತು. ಅವರಿಗೆ ಇತ್ತೀಚೆಗೆ ಒಂದು ಇಂಜೆಕ್ಷನ್ ನೀಡಲಾಗಿತ್ತು. ಆದರೆ ಇಂಜೆಕ್ಷನ್ಗೆ ಅವರ ದೇಹ ಸಹಕರಿಸದೇ ಇದ್ದುದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ನಿಶ್ಯಕ್ತಿಯಿಂದ ಬಳಲುತ್ತಿದ್ದ ಅವರನ್ನ ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Veteran Kannada actor Harish Rai (55), who gained fame for his villainous roles in films like Om and KGF, passed away in Bengaluru after battling thyroid cancer. The actor was undergoing treatment at Kidwai Memorial Institute of Oncology.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm