ಬ್ರೇಕಿಂಗ್ ನ್ಯೂಸ್
08-11-25 12:38 pm HK News Desk ಕರ್ನಾಟಕ
ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿರುವ ಆರ್ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಆರ್ ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಅವರು, ಕಲಬುರಗಿ ಜಿಲ್ಲಾಡಳಿತ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಿ ಸಮಸ್ಯೆ ಶಾಂತಿಯುತ ಇತ್ಯರ್ಥಕ್ಕೆ ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದರೆ, ನ್ಯಾಯಾಲಯವೇ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಅಂದು ನ್ಯಾಯಾಲಯಕ್ಕೆ ದಿನ ನಿಗದಿಪಡಿಸಿದ ವಿವರಗಳೊಂದಿಗೆ ಬರುವಂತೆ ನಿರ್ದೇಶಿಸಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ಗೆ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸಲು ಕಲಬುರ್ಗಿ ಜಿಲ್ಲಾಡಳಿತಕ್ಕೆ 11 ಅರ್ಜಿಗಳು ಬಂದಿವೆ ಮತ್ತು ಹೆಚ್ಚಿನ ಸಂಘಟನೆಗಳು ಆರ್ಎಸ್ಎಸ್ ಪಥ ಸಂಚಲನ ನಡೆಸುವ ದಿನದಂದೇ ಅನುಮತಿ ಕೇಳಿವೆ ಎಂದರು.
ಜಿಲ್ಲಾಡಳಿತವು ಈ ಸಂಘಟನೆಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡುತ್ತದೆ. ಒಂದು ವಾರದೊಳಗೆ ಜಿಲ್ಲಾಡಳಿತವು ವಿವಿಧ ಸಂಸ್ಥೆಗಳಿಗೆ ರೂಟ್ ಮಾರ್ಚ್ ನಡೆಸುವ ದಿನಾಂಕಗಳನ್ನು ನಿಗದಿಪಡಿಸಲಿದೆ. ವರದಿಯನ್ನು ಸಲ್ಲಿಸಲು ಒಂದು ವಾರದ ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೇಳಿಕೊಂಡರು. ಆರ್ಎಸ್ಎಸ್ ಪರವಾಗಿ ವಾದಿಸಿದ ವಕೀಲ ಅರುಣ್ ಶ್ಯಾಮ್, ನವೆಂಬರ್ 13 ಅಥವಾ 16 ರಂದು ಆರ್ಎಸ್ಎಸ್ ಪಥ ಸಂಚಲನ ನಡೆಸಲು ಅವಕಾಶ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
The Karnataka High Court, Kalaburagi Bench, has directed the Kalaburagi district administration to allocate separate dates for different organizations, including the RSS, that have applied to conduct route marches (patha sanchalans) in Chittapur town.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm