ಬ್ರೇಕಿಂಗ್ ನ್ಯೂಸ್
09-11-25 03:47 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ದುರ್ಬಳಕೆ ನಡೆದಿರುವ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೊಸೈಟಿ ಅಕೌಂಟೆಂಟ್ ಲಕ್ಷ್ಮಿ ಜಗದೀಶ್ ಮನೆಯಲ್ಲಿ ಅರ್ಧ ಕೆ.ಜಿ.ಗೂ ಅಧಿಕ ಚಿನ್ನ, ಆಸ್ತಿ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳಾದ ಸೊಸೈಟಿಯ ಸಿಇಒ ಜಿ. ಗೋಪಿನಾಥ್, ಲೆಕ್ಕಾಧಿಕಾರಿ ಬಿ.ಎಲ್. ಜಗದೀಶ್, ಪತ್ನಿ ಲಕ್ಷ್ಮಿ ಜಗದೀಶ್ ಅವರ ನಿವಾಸಗಳು ಹಾಗೂ ಕಚೇರಿಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಶೋಧದ ವೇಳೆ ಸುಮಾರು ಅರ್ಧ ಕೆಜಿ ಚಿನ್ನಾಭರಣ, ಥಾರ್ ಜೀಪು, ಬಿಎಂಡಬ್ಲ್ಯು ಸೇರಿ ಐಷಾರಾಮಿ ಕಾರುಗಳು, ದುಬಾರಿ ಮೌಲ್ಯದ ಬೈಕ್ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಲಾಗಿದೆ. ಜತೆಗೆ, ಭೂಮಿ ಖರೀದಿಯ ದಾಖಲೆಗಳು ಸಿಕ್ಕಿವೆ. ಆರೋಪಿಗಳು ಅಕ್ರಮವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಸಹಕಾರ ಸಂಘದ ಕಚೇರಿಯಲ್ಲಿ ಪೊಲೀಸರು ಮಹಜರು ನಡೆಸಿ, ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜರಾಜೇಶ್ವರಿನಗರ, ಜೆ.ಪಿ. ನಗರ ಮತ್ತು ಅಂಜನಾಪುರದಲ್ಲಿರುವ ಆರೋಪಿಗಳಾದ ಸಿಇಒ ಜಿ. ಗೋಪಿನಾಥ್, ಲಕ್ಷ್ಮಿ ಆರ್., ಆರೋಪಿ ನಂಬರ್ 9 ಲಿಂಗೇಗೌಡ ಮತ್ತು ಆರೋಪಿ ನಂಬರ್ 10 ರಮಾನುಜ ಅವರ ಮನೆಗಳಲ್ಲೂ ಶೋಧ ನಡೆಸಲಾಗಿದೆ.
ಅವ್ಯವಹಾರದ ಬಗ್ಗೆ ಸಂಘದ ಅಧ್ಯಕ್ಷ ಸಿ.ಜೆ. ಮುರಳೀಧರ್ ಅವರು ಕಳೆದ ವಾರ ದೂರು ಸಲ್ಲಿಸಿದ್ದರು. ಸುಮಾರು 300 ನೌಕರರು ಮತ್ತು ನಿವೃತ್ತ ನೌಕರರು ಠೇವಣಿ ಇಟ್ಟಿದ್ದ 70 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In connection with the ₹70 crore embezzlement case in the Employees’ Provident Fund (EPF) Cooperative Society, the Cubbon Park Police have seized over half a kilogram of gold ornaments and property documents from the residence of the society’s accountant, Lakshmi Jagadish.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm