ಬ್ರೇಕಿಂಗ್ ನ್ಯೂಸ್
09-11-25 03:47 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ದುರ್ಬಳಕೆ ನಡೆದಿರುವ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೊಸೈಟಿ ಅಕೌಂಟೆಂಟ್ ಲಕ್ಷ್ಮಿ ಜಗದೀಶ್ ಮನೆಯಲ್ಲಿ ಅರ್ಧ ಕೆ.ಜಿ.ಗೂ ಅಧಿಕ ಚಿನ್ನ, ಆಸ್ತಿ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳಾದ ಸೊಸೈಟಿಯ ಸಿಇಒ ಜಿ. ಗೋಪಿನಾಥ್, ಲೆಕ್ಕಾಧಿಕಾರಿ ಬಿ.ಎಲ್. ಜಗದೀಶ್, ಪತ್ನಿ ಲಕ್ಷ್ಮಿ ಜಗದೀಶ್ ಅವರ ನಿವಾಸಗಳು ಹಾಗೂ ಕಚೇರಿಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಶೋಧದ ವೇಳೆ ಸುಮಾರು ಅರ್ಧ ಕೆಜಿ ಚಿನ್ನಾಭರಣ, ಥಾರ್ ಜೀಪು, ಬಿಎಂಡಬ್ಲ್ಯು ಸೇರಿ ಐಷಾರಾಮಿ ಕಾರುಗಳು, ದುಬಾರಿ ಮೌಲ್ಯದ ಬೈಕ್ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಲಾಗಿದೆ. ಜತೆಗೆ, ಭೂಮಿ ಖರೀದಿಯ ದಾಖಲೆಗಳು ಸಿಕ್ಕಿವೆ. ಆರೋಪಿಗಳು ಅಕ್ರಮವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಸಹಕಾರ ಸಂಘದ ಕಚೇರಿಯಲ್ಲಿ ಪೊಲೀಸರು ಮಹಜರು ನಡೆಸಿ, ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜರಾಜೇಶ್ವರಿನಗರ, ಜೆ.ಪಿ. ನಗರ ಮತ್ತು ಅಂಜನಾಪುರದಲ್ಲಿರುವ ಆರೋಪಿಗಳಾದ ಸಿಇಒ ಜಿ. ಗೋಪಿನಾಥ್, ಲಕ್ಷ್ಮಿ ಆರ್., ಆರೋಪಿ ನಂಬರ್ 9 ಲಿಂಗೇಗೌಡ ಮತ್ತು ಆರೋಪಿ ನಂಬರ್ 10 ರಮಾನುಜ ಅವರ ಮನೆಗಳಲ್ಲೂ ಶೋಧ ನಡೆಸಲಾಗಿದೆ.
ಅವ್ಯವಹಾರದ ಬಗ್ಗೆ ಸಂಘದ ಅಧ್ಯಕ್ಷ ಸಿ.ಜೆ. ಮುರಳೀಧರ್ ಅವರು ಕಳೆದ ವಾರ ದೂರು ಸಲ್ಲಿಸಿದ್ದರು. ಸುಮಾರು 300 ನೌಕರರು ಮತ್ತು ನಿವೃತ್ತ ನೌಕರರು ಠೇವಣಿ ಇಟ್ಟಿದ್ದ 70 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In connection with the ₹70 crore embezzlement case in the Employees’ Provident Fund (EPF) Cooperative Society, the Cubbon Park Police have seized over half a kilogram of gold ornaments and property documents from the residence of the society’s accountant, Lakshmi Jagadish.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm