ಬ್ರೇಕಿಂಗ್ ನ್ಯೂಸ್
09-11-25 06:53 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ರಾಷ್ಟ್ರೀಯ ಸ್ವಯಂಸೇವಕ ಸಂಘವು 1925ರಲ್ಲಿ ಸ್ಥಾಪನೆಯಾಗಿದ್ದು ಆಗ ಬ್ರಿಟಿಷರು ಆಳುತ್ತಿದ್ದರು. ಬ್ರಿಟಿಷರ ಆಡಳಿತದಲ್ಲಿ ನಾವು ನೋಂದಣಿ ಮಾಡಬೇಕಿತ್ತಾ..? ಆನಂತರ, ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಮಾಡಬೇಕೆಂದು ಕಡ್ಡಾಯ ಮಾಡಲಿಲ್ಲ. ಈಗ ಆರೆಸ್ಸೆಸ್ ನೂರನೇ ವರ್ಷದ ಸಂಭ್ರಮದಲ್ಲಿದ್ದು ಒಂದು ಸಂಘಟನೆಯಾಗಿ ನೋಂದಣಿ ಮಾಡಿಕೊಳ್ಳದೆ ರಾಷ್ಟ್ರೀಯ ವಿಚಾರಧಾರೆಗಾಗಿ ತನ್ನನ್ನು ತಾನು ಅರ್ಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
'ಸಾಕಷ್ಟು ಬಾರಿ ಈ ಪ್ರಶ್ನೆಯನ್ನು ಕೇಳಲಾಗಿದ್ದು, ನಾವು ಉತ್ತರವನ್ನೂ ನೀಡಿದ್ದೇವೆ. ನಾವು ಬ್ರಿಟೀಷ್ ಸರ್ಕಾರದಲ್ಲಿ ನೋಂದಾಯಿಸಿಕೊಳ್ಳಬೇಕಿತ್ತು ಎಂದು ನೀವು ನಿರೀಕ್ಷಿಸುತ್ತೀರಾ? ಆಗ ಬ್ರಿಟಿಷರ ವಿರುದ್ಧ ಹೋರಾಟಕ್ಕಾಗಿ, ಜನರಲ್ಲಿ ರಾಷ್ಟ್ರೀಯ ಪರಿಕಲ್ಪನೆ ಬಿತ್ತುವುದಕ್ಕಾಗಿ ಸಂಘವನ್ನು ಸ್ಥಾಪಿಸಲಾಗಿತ್ತು ಎಂದು ಆರ್ಎಸ್ಎಸ್ ಆಯೋಜಿಸಿದ್ದ ಆಂತರಿಕ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಭಾಗವತ್ ಈ ಉತ್ತರ ನೀಡಿದರು. ಅಂದು ನಮ್ಮ ಹೋರಾಟ ಬ್ರಿಟಿಷರ ವಿರುದ್ಧ ಇತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಸಂಘಗಳನ್ನು ನೋಂದಣಿ ಮಾಡಬೇಕೆಂದು ಭಾರತ ಸರ್ಕಾರ ಕಡ್ಡಾಯಗೊಳಿಸಲಿಲ್ಲ. ನಮ್ಮನ್ನು ಸಾಮಾನ್ಯ ನಂಬಿಕೆಗಳನ್ನು ಹಂಚಿಕೊಳ್ಳುವ ಮತ್ತು ಸ್ವಯಂಪ್ರೇರಣೆಯಿಂದ ಕೆಲಸ ಮಾಡುವ ಜನರ ಗುಂಪು ಎಂದು ವರ್ಗೀಕರಿಸಲಾಗಿದೆ ಮತ್ತು ನಮ್ಮದು ಮಾನ್ಯತೆ ಪಡೆದ ಸಂಸ್ಥೆ ಎಂದು ಭಾಗವತ್ ಹೇಳಿದರು.
ಆದಾಯ ತೆರಿಗೆ ಇಲಾಖೆ ಮತ್ತು ನ್ಯಾಯಾಲಯಗಳು, ಒಂದು ಸಾಮಾನ್ಯ ಉದ್ದೇಶಕ್ಕಾಗಿ ಒಟ್ಟುಗೂಡುವ ಆದರೆ ಔಪಚಾರಿಕವಾಗಿ ಕಂಪನಿ, ಟ್ರಸ್ಟ್ ಅಥವಾ ಸಮಾಜವಾಗಿ ನೋಂದಾಯಿಸದ ಜನರ ಗುಂಪು ಎಂದಿದೆ. ಈ ವರ್ಗೀಕರಣದಿಂದಾಗಿ, ಆರ್ಎಸ್ಎಸ್ಗೆ ಆದಾಯ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದರು.
ಭಾರತದ ಇತಿಹಾಸದಲ್ಲಿ ಆರ್ಎಸ್ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು. (1948ರಲ್ಲಿ ಗಾಂಧೀಜಿ ಹತ್ಯೆ ನಂತರ, 1975 ರಲ್ಲಿ ತುರ್ತು ಪರಿಸ್ಥಿತಿ ಸಮಯ ಮತ್ತು 1992ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ) ಆದರೆ, ಕೋರ್ಟ್ ಈ ನಿಷೇಧವನ್ನು ತಿರಸ್ಕರಿಸಿದೆ. ಬಳಿಕ ಸರ್ಕಾರವು ಆರ್ಎಸ್ಎಸ್ ಅನ್ನು ಮಹತ್ವದ ಸಂಘಟನೆ ಎಂದು ಗುರುತಿಸಿದೆ. ನಾವು ಅಲ್ಲಿ ಇಲ್ಲದಿದ್ದರೆ, ಅವರು ಯಾರನ್ನು ನಿಷೇಧಿಸಿದರು? ಎಂದು ಟೀಕಾಕಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇಲ್ಲಿ ನೋಂದಣಿಯಾಗದ ಹಲವು ವಿಷಯಗಳಿವೆ. ಹಿಂದೂ ಧರ್ಮವೂ ಸಹ ನೋಂದಣಿಯಾಗಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದರು.
ಆರ್ಎಸ್ಎಸ್ ದೇಶದ ತ್ರಿವರ್ಣ ಧ್ವಜವನ್ನು ಗೌರವಿಸುವುದಿಲ್ಲ ಎಂಬ ವಿಷಯದ ಕುರಿತು ಪ್ರತಿಕ್ರಿಯಿಸಿದ ಭಾಗವತ್, ಆರ್ಎಸ್ಎಸ್ನಲ್ಲಿ ಕೇಸರಿಯನ್ನು ಗುರು ಎಂದು ಪರಿಗಣಿಸಿದ್ದರೂ, ಅದು ಭಾರತದ ತ್ರಿವರ್ಣ ಧ್ವಜದ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದೆ. ನಾವು ಯಾವಾಗಲೂ ನಮ್ಮ ತ್ರಿವರ್ಣ ಧ್ವಜವನ್ನು ಗೌರವಿಸುತ್ತೇವೆ, ಗೌರವ ಸಲ್ಲಿಸುತ್ತೇವೆ ಮತ್ತು ರಕ್ಷಿಸುತ್ತೇವೆ ಎಂದು ಭಾಗವತ್ ಹೇಳಿದರು. ಸಂಘದಲ್ಲಿ ಜಾತಿ, ಲಿಂಗ, ಮುಸ್ಲಿಂ, ಕ್ರೈಸ್ತ, ಬ್ರಾಹ್ಮಣ, ಶೈವ ಎಂಬ ಪಂಥಗಳಿಗೆ ಅವಕಾಶ ಇಲ್ಲ. ಯಾವುದೇ ಧರ್ಮದವರು ಶಾಖೆಗೆ ಬರಬಹುದು. ಆದರೆ ಶಾಖೆಗೆ ಬರುವವರು ತಮ್ಮ ಧರ್ಮವನ್ನು ಹೊರಗಿಟ್ಟು, ಭಾರತ ಮಾತೆಯ ಮಕ್ಕಳಾಗಿ ಬರಬೇಕು. `ಮೆಂಬರ್ ಆಫ್ ದಿ ಹಿಂದೂ ಸೊಸೈಟಿ’ ಅಡಿಯಲ್ಲಿ ಮುಸ್ಲಿಂ, ಕ್ರೈಸ್ತ ಯಾರು ಬೇಕಾದರೂ ಶಾಖೆಗೆ ಬರಬಹುದು. ನೀವು ಹಿಂದೂ ಸಮಾಜವನ್ನು ಒಪ್ಪಿಕೊಂಡು ಬಂದರೆ ನೀವು ಯಾವ ಧರ್ಮದವರೆಂದು ನಾವು ಕೇಳುವುದಿಲ್ಲ ಎಂದರು.
Rashtriya Swayamsevak Sangh (RSS) chief Mohan Bhagwat has clarified that the RSS, established in 1925, was formed during British rule and therefore was not registered at that time. “We were under British rule then — should we have registered under their government? The Sangh was started to instill a sense of national consciousness among Indians who were fighting against British rule,” Bhagwat explained during an internal question-and-answer session organized by the RSS.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm