ಬ್ರೇಕಿಂಗ್ ನ್ಯೂಸ್
10-11-25 01:23 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವಾಗಲೇ ಕರ್ನಾಟಕ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ಎಕ್ಸ್ನಲ್ಲಿ ಎಐ ವಿಡಿಯೋ ಬಿಡುಗಡೆ ಮಾಡಿದ್ದು, ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಡಿಕೆ ಶಿವಕುಮಾರ್ ಅವರಿಗೆ 'ನೋ ಚೇರ್ ನವೆಂಬರ್' ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕರ್ನಾಟಕ ಎಐ ವಿಡಿಯೋವನ್ನು ಹಂಚಿಕೊಂಡಿದೆ. ಎಐ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಮೊಬೈಲ್ ನಿಂದ ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್ನಲ್ಲಿ "ಹಾಯ್" ಕಳುಹಿಸುತ್ತಿರುವುದನ್ನು ತೋರಿಸಲಾಗಿದೆ. ಇದರ ನಂತರ "ಸ್ಕ್ರ್ಯಾಚ್" ಕಾರ್ಡ್ ಬರುತ್ತದೆ.

ಡಿಕೆ ಶಿವಕುಮಾರ್ ಅವರು ಆ ಸ್ಕ್ರ್ಯಾಚ್ ಕಾರ್ಡ್ ಅನ್ನು ಗೀಚುತ್ತಿದ್ದಂತೆ, ಅವರಿಗೆ "ನೋ ಚೇರ್ ನವೆಂಬರ್" ಬಹುಮಾನ ರೂಪದಲ್ಲಿ ಬರುತ್ತದೆ. ನಂತರ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಬ್ಬರೂ ಜೊತೆಯಾಗಿ ನಗುತ್ತಿರುವುದು ಕಂಡುಬರುತ್ತದೆ. ಡಿಕೆಶಿ ಅವರನ್ನು ಅಣಕಿಸಿ ಈ ವಿಡಿಯೋ ಮಾಡಲಾಗಿದೆ.
ಬಿಹಾರ ಚುನಾವಣೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಕುರಿತು ಚರ್ಚಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬಿಹಾರ ಚುನಾವಣೆಯ ನಂತರ ರಾಹುಲ್ ಗಾಂಧಿ ಮತ್ತು ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಕುರಿತು ಚರ್ಚಿಸುತ್ತೇನೆ. ಜನರು ಏನು ಬೇಕಾದರೂ ಹೇಳಬಹುದು. ಹೈಕಮಾಂಡ್ ಯಾರು? ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಏನಾದರೂ ಹೇಳಿದ್ದಾರೆಯೇ? ಜನರಿಗಿಂತ ಹೆಚ್ಚಾಗಿ, ಮಾಧ್ಯಮಗಳು ಇದರ ಬಗ್ಗೆ ಚರ್ಚಿಸುತ್ತಿವೆ. ಹೈಕಮಾಂಡ್ ಹೊರತುಪಡಿಸಿ, ಇತರರು ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿದ್ದರಾಮಯ್ಯರನ್ನು ತಳ್ಳಿದ ಡಿಕೆಶಿ - ಎಐ ವಿಡಿಯೋ ವಿರುದ್ಧ ಕೇಸು
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ತಳ್ಳುತ್ತಿರುವಂತೆ ತೋರಿಸುವ ಎಐ ನಿರ್ಮಿತ ವಿಡಿಯೋ ಪೋಸ್ಟ್ ಸಂಬಂಧ ‘ಕನ್ನಡ ಚಿತ್ರರಂಗ’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ. ಗಲಭೆ ಪ್ರಚೋದನೆ, ನಕಲಿ ದಾಖಲೆ ಸೃಷ್ಟಿ ಮತ್ತು ಸಾರ್ವಜನಿಕ ಅಶಾಂತಿ ಉಂಟುಮಾಡಿದ ಆರೋಪದ ಹಿನ್ನೆಲೆ ವಕೀಲ ದೀಪು ಸಿ.ಆರ್. ಅವರು ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
Amid intense speculation over a leadership change in Karnataka, the state BJP has released an AI-generated video on social media platform X, targeting the ruling Congress government.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am