ಬ್ರೇಕಿಂಗ್ ನ್ಯೂಸ್
10-11-25 01:23 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವಾಗಲೇ ಕರ್ನಾಟಕ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ಎಕ್ಸ್ನಲ್ಲಿ ಎಐ ವಿಡಿಯೋ ಬಿಡುಗಡೆ ಮಾಡಿದ್ದು, ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಡಿಕೆ ಶಿವಕುಮಾರ್ ಅವರಿಗೆ 'ನೋ ಚೇರ್ ನವೆಂಬರ್' ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕರ್ನಾಟಕ ಎಐ ವಿಡಿಯೋವನ್ನು ಹಂಚಿಕೊಂಡಿದೆ. ಎಐ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಮೊಬೈಲ್ ನಿಂದ ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್ನಲ್ಲಿ "ಹಾಯ್" ಕಳುಹಿಸುತ್ತಿರುವುದನ್ನು ತೋರಿಸಲಾಗಿದೆ. ಇದರ ನಂತರ "ಸ್ಕ್ರ್ಯಾಚ್" ಕಾರ್ಡ್ ಬರುತ್ತದೆ.

ಡಿಕೆ ಶಿವಕುಮಾರ್ ಅವರು ಆ ಸ್ಕ್ರ್ಯಾಚ್ ಕಾರ್ಡ್ ಅನ್ನು ಗೀಚುತ್ತಿದ್ದಂತೆ, ಅವರಿಗೆ "ನೋ ಚೇರ್ ನವೆಂಬರ್" ಬಹುಮಾನ ರೂಪದಲ್ಲಿ ಬರುತ್ತದೆ. ನಂತರ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಬ್ಬರೂ ಜೊತೆಯಾಗಿ ನಗುತ್ತಿರುವುದು ಕಂಡುಬರುತ್ತದೆ. ಡಿಕೆಶಿ ಅವರನ್ನು ಅಣಕಿಸಿ ಈ ವಿಡಿಯೋ ಮಾಡಲಾಗಿದೆ.
ಬಿಹಾರ ಚುನಾವಣೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಕುರಿತು ಚರ್ಚಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬಿಹಾರ ಚುನಾವಣೆಯ ನಂತರ ರಾಹುಲ್ ಗಾಂಧಿ ಮತ್ತು ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಕುರಿತು ಚರ್ಚಿಸುತ್ತೇನೆ. ಜನರು ಏನು ಬೇಕಾದರೂ ಹೇಳಬಹುದು. ಹೈಕಮಾಂಡ್ ಯಾರು? ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಏನಾದರೂ ಹೇಳಿದ್ದಾರೆಯೇ? ಜನರಿಗಿಂತ ಹೆಚ್ಚಾಗಿ, ಮಾಧ್ಯಮಗಳು ಇದರ ಬಗ್ಗೆ ಚರ್ಚಿಸುತ್ತಿವೆ. ಹೈಕಮಾಂಡ್ ಹೊರತುಪಡಿಸಿ, ಇತರರು ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿದ್ದರಾಮಯ್ಯರನ್ನು ತಳ್ಳಿದ ಡಿಕೆಶಿ - ಎಐ ವಿಡಿಯೋ ವಿರುದ್ಧ ಕೇಸು
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ತಳ್ಳುತ್ತಿರುವಂತೆ ತೋರಿಸುವ ಎಐ ನಿರ್ಮಿತ ವಿಡಿಯೋ ಪೋಸ್ಟ್ ಸಂಬಂಧ ‘ಕನ್ನಡ ಚಿತ್ರರಂಗ’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ. ಗಲಭೆ ಪ್ರಚೋದನೆ, ನಕಲಿ ದಾಖಲೆ ಸೃಷ್ಟಿ ಮತ್ತು ಸಾರ್ವಜನಿಕ ಅಶಾಂತಿ ಉಂಟುಮಾಡಿದ ಆರೋಪದ ಹಿನ್ನೆಲೆ ವಕೀಲ ದೀಪು ಸಿ.ಆರ್. ಅವರು ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
Amid intense speculation over a leadership change in Karnataka, the state BJP has released an AI-generated video on social media platform X, targeting the ruling Congress government.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm