ಬ್ರೇಕಿಂಗ್ ನ್ಯೂಸ್
29-12-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.29: ಮಕರ ಸಂಕ್ರಮಣದ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ ನೀಡಿದ್ದ ಹೇಳಿಕೆಗೆ ಪೂರಕವಾಗಿ ಮತ್ತಿಬ್ಬರು ನಾಯಕರು ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ನೀಡಿದ ಹೇಳಿಕೆ ಈಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ತಟ್ಟಿದೆ. ಹಾಗೆಯೇ ಬಿಜೆಪಿಯ ಕೆಲ ಶಾಸಕರ ಶಾಪವೂ ಇದೆ. ಈ ಕಾರಣಕ್ಕೆ ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಿಕಾರದಲ್ಲಿ ಇರುವುದಿಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಎಂ ಸ್ಥಾನದಲ್ಲಿ ಬದಲಾವಣೆ ಆಗುತ್ತೋ ಇಲ್ಲವೋ.. ಎಂದು ಹೇಳುತ್ತಿಲ್ಲ. ಆದರೆ, ತನಗೆ ಬಂದ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನ ಕೆಳಗಿಳಿಸಲು ಗಂಭೀರ ಪ್ರಯತ್ನಗಳು ನಡೆಯುತ್ತಿವೆ. ಜನವರಿ 16ರ ನಂತರ ಅವರು ಅಧಿಕಾರದಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂದಿದ್ದಾರೆ.
ಸಿಗಂದೂರು ಕ್ಷೇತ್ರದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಯಡಿಯೂರಪ್ಪ ಅವರು ದೇವಿಯ ಶಾಪಕ್ಕೆ ತುತ್ತಾಗಿದ್ಧಾರೆ. ಹೀಗಾಗಿಯೇ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಶನ್ ಪ್ರಕರಣ ಬಂದಿದೆ. ಇದು ದೇವಿಯ ಶಾಪ ತಟ್ಟಿರುವುದಕ್ಕೆ ಸಾಕ್ಷಿ. ನಾನು ಯಡಿಯೂರಪ್ಪ ಅವರ ರಾಜೀನಾಮೆ ಕೇಳುವುದಿಲ್ಲ. ಯಡಿಯೂರಪ್ಪ ಬಗ್ಗೆ ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕರೂ ಆಗಿರುವ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಹೇಳಿಕೆ ನೀಡಿದ್ದು ನಾಯಕತ್ವ ಬದಲಾವಣೆಯ ಸುಳಿವನ್ನು ನೀಡಿದ್ದಾರೆ. ದತ್ತಮಾಲ ಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿಯಾಗಿ ಭಿಕ್ಷಾಟನೆ ಹೊರಡುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯ ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ರಾಜಕಾರಣದಲ್ಲಿ ಎಲ್ಲವೂ ಇರುತ್ತೆ. ಸದ್ದುಗದ್ದಲ ಇಲ್ಲದಿದ್ದರೆ ಜಾತ್ರೆ ಆಗಲ್ಲ ಎಂದು ಸಿ.ಟಿ. ರವಿ ಹೇಳಿದ್ಧಾರೆ. ಯತ್ನಾಳ್ ಹೇಳಿಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಿ.ಟಿ. ರವಿ ಈ ರೀತಿ ಪ್ರತಿಕ್ರಿಯೆ ನೀಡಿದ್ದು ಕುತೂಹಲ ಮೂಡಿಸಿದೆ.
ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಬಿಜೆಪಿ ನಾಯಕರು ಎಷ್ಟೇ ಹೇಳಿಕೊಂಡರೂ, ಒಳಗಿಂದೊಳಗೆ ಸಿಎಂ ಪದಚ್ಯುತಿಗೆ ಪ್ರಯತ್ನಗಳು ನಡೆಯುತ್ತಲೇ ಇದೆ. ಸಂಕ್ರಾಂತಿ ವೇಳೆಗೆ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು ಎಂಬ ಲೆಕ್ಕಾಚಾರವನ್ನು ಯಡಿಯೂರಪ್ಪ ವಿರೋಧಿಗಳು ಮಾಡುತ್ತಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm