ಬ್ರೇಕಿಂಗ್ ನ್ಯೂಸ್
29-12-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.29: ಮಕರ ಸಂಕ್ರಮಣದ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ ನೀಡಿದ್ದ ಹೇಳಿಕೆಗೆ ಪೂರಕವಾಗಿ ಮತ್ತಿಬ್ಬರು ನಾಯಕರು ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ನೀಡಿದ ಹೇಳಿಕೆ ಈಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ತಟ್ಟಿದೆ. ಹಾಗೆಯೇ ಬಿಜೆಪಿಯ ಕೆಲ ಶಾಸಕರ ಶಾಪವೂ ಇದೆ. ಈ ಕಾರಣಕ್ಕೆ ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಿಕಾರದಲ್ಲಿ ಇರುವುದಿಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಎಂ ಸ್ಥಾನದಲ್ಲಿ ಬದಲಾವಣೆ ಆಗುತ್ತೋ ಇಲ್ಲವೋ.. ಎಂದು ಹೇಳುತ್ತಿಲ್ಲ. ಆದರೆ, ತನಗೆ ಬಂದ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನ ಕೆಳಗಿಳಿಸಲು ಗಂಭೀರ ಪ್ರಯತ್ನಗಳು ನಡೆಯುತ್ತಿವೆ. ಜನವರಿ 16ರ ನಂತರ ಅವರು ಅಧಿಕಾರದಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂದಿದ್ದಾರೆ.
ಸಿಗಂದೂರು ಕ್ಷೇತ್ರದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಯಡಿಯೂರಪ್ಪ ಅವರು ದೇವಿಯ ಶಾಪಕ್ಕೆ ತುತ್ತಾಗಿದ್ಧಾರೆ. ಹೀಗಾಗಿಯೇ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಶನ್ ಪ್ರಕರಣ ಬಂದಿದೆ. ಇದು ದೇವಿಯ ಶಾಪ ತಟ್ಟಿರುವುದಕ್ಕೆ ಸಾಕ್ಷಿ. ನಾನು ಯಡಿಯೂರಪ್ಪ ಅವರ ರಾಜೀನಾಮೆ ಕೇಳುವುದಿಲ್ಲ. ಯಡಿಯೂರಪ್ಪ ಬಗ್ಗೆ ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕರೂ ಆಗಿರುವ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಹೇಳಿಕೆ ನೀಡಿದ್ದು ನಾಯಕತ್ವ ಬದಲಾವಣೆಯ ಸುಳಿವನ್ನು ನೀಡಿದ್ದಾರೆ. ದತ್ತಮಾಲ ಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿಯಾಗಿ ಭಿಕ್ಷಾಟನೆ ಹೊರಡುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯ ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ರಾಜಕಾರಣದಲ್ಲಿ ಎಲ್ಲವೂ ಇರುತ್ತೆ. ಸದ್ದುಗದ್ದಲ ಇಲ್ಲದಿದ್ದರೆ ಜಾತ್ರೆ ಆಗಲ್ಲ ಎಂದು ಸಿ.ಟಿ. ರವಿ ಹೇಳಿದ್ಧಾರೆ. ಯತ್ನಾಳ್ ಹೇಳಿಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಿ.ಟಿ. ರವಿ ಈ ರೀತಿ ಪ್ರತಿಕ್ರಿಯೆ ನೀಡಿದ್ದು ಕುತೂಹಲ ಮೂಡಿಸಿದೆ.
ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಬಿಜೆಪಿ ನಾಯಕರು ಎಷ್ಟೇ ಹೇಳಿಕೊಂಡರೂ, ಒಳಗಿಂದೊಳಗೆ ಸಿಎಂ ಪದಚ್ಯುತಿಗೆ ಪ್ರಯತ್ನಗಳು ನಡೆಯುತ್ತಲೇ ಇದೆ. ಸಂಕ್ರಾಂತಿ ವೇಳೆಗೆ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು ಎಂಬ ಲೆಕ್ಕಾಚಾರವನ್ನು ಯಡಿಯೂರಪ್ಪ ವಿರೋಧಿಗಳು ಮಾಡುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm