ಬ್ರೇಕಿಂಗ್ ನ್ಯೂಸ್
19-11-25 12:20 pm HK News Desk ಕರ್ನಾಟಕ
ಮೈಸೂರು, ನ.19 : ಹಿಂದಿನ ಕಾಲಘಟ್ಟದಲ್ಲಿ ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದರು ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಕ್ಕೆ ಗುರಿಯಾಗಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಹಿಂದಿನ ಕಾಲದಲ್ಲಿ ಅಂತಹ ಅನಿವಾರ್ಯತೆ ಇದ್ದಿತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿದ್ದವು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ನಂತರದ ಭಾಷಣದಲ್ಲಿ ಪುರುಷೋತ್ತಮ ಬಿಳಿಮಲೆಯವರು ನೀಡಿದ ಈ ಹೇಳಿಕೆ ಬಾರೀ ವಿವಾದ ಹುಟ್ಟಿಸಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದರು.
ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದುದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಹೇಳಿದರು. ಈಗ ನಾವು ಹೋಮೋ ಸೆಕ್ಸುವಲ್ ಬಗ್ಗೆ ಮಾತನಾಡುತ್ತೇವೆ, ಬಹಳ ಕೇಳುತ್ತೇವೆ, ಹಿಂದೆ ಅಂತಹ ಮುಕ್ತ ವಾತಾವರಣವಿರಲಿಲ್ಲ. ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಗಳ ಮೇಲೆ ಒತ್ತಡ, ನಾವು ಚಿಕ್ಕವರಿದ್ದಾಗ ನಮ್ಮ ಫಸ್ಟ್ ಕ್ರಶ್ ಗಳು ಸ್ತ್ರೀ ವೇಷಧಾರಿಗಳು, ಈಗ ಸಿನಿಮಾ ನಟ, ನಟಿಯರ ಹೆಸರನ್ನು ಶಾಲೆ-ಕಾಲೇಜಿಗೆ ಹೋಗುವ ಹುಡುಗರು, ಹುಡುಗಿಯರು ಹೇಳುತ್ತಾರೆ, ನಮಗೆ ಆಗ ಇದ್ದದ್ದು ಕ್ರಶ್ ಸ್ತ್ರೀ ವೇಷಧಾರಿಗಳ ಮೇಲೆ. ಅವರು ರಂಗದ ಮೇಲೆ ಬಂದು ಕುಣಿದರೆ ನೋಡಲು ಏನು ಚೆಂದವಿತ್ತು.
ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಬಾರದು. ಅವರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದಿದ್ದಾರೆ.
Kannada Development Authority Chairman Prof. Purushothama Bilimale has stirred a major controversy after stating that many Yaksagana artists in earlier decades were forced into same-sex exploitation. Speaking at a book-release event in Mysuru, Bilimale claimed that several male artists in female roles faced pressure from senior performers and troupe leaders, and refusing advances allegedly led to being denied roles or removed from troupes.
19-11-25 12:20 pm
HK News Desk
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
19-11-25 01:01 pm
Mangalore Correspondent
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am