ಬ್ರೇಕಿಂಗ್ ನ್ಯೂಸ್
21-11-25 05:25 pm HK News Desk ಕರ್ನಾಟಕ
ಮೈಸೂರು, ನ.21 : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾವೆಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಆದರೆ ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಮತ್ತು ಮುಂದಿನ ಎರಡು ಬಜೆಟನ್ನೂ ನಾನೇ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ದೆಹಲಿಗೆ ತೆರಳಿರುವ ಶಾಸಕರ ಟೀಮಿಗೂ ಸಂದೇಶ ರವಾನಿಸಿದ್ದಾರೆ.
ಸಿಎಂ ಆಗಿ ನಾನೇ ಐದು ವರ್ಷ ಕಾಲ ಮುಂದುವರಿಯುತ್ತೇನೆ. ಇನ್ನು ಎರಡು ಬಜೆಟ್ ನಾನೇ ಮಂಡಿಸುತ್ತೇನೆ. ಆದರೆ ಹೈಕಮಾಂಡ್ ಏನು ಹೇಳಿದರೂ ಕೇಳಬೇಕಾಗುತ್ತದೆ, ಡಿಕೆ ಶಿವಕುಮಾರ್ ಅವರೂ ಕೇಳಬೇಕು. ಹೈಕಮಾಂಡ್ ಮಾತಿಗೆ ನಾವು ಬದ್ಧ. ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಹೇಳಿಲ್ಲ ಎಂದ ಮೇಲೆ ನೀವು ಯಾಕೆ ಪದೇ ಪದೇ ಕೇಳಬೇಕು ಎಂದು ತಿವಿದಿದ್ದಾರೆ.
ಇದೇ ವೇಳೆ ಡಿಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರು "ಸಿದ್ದರಾಮಯ್ಯ ಎಂದಿಗೂ ಮಾತು ತಪ್ಪಲ್ಲ" ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಹೌದು, ನಾನು ಮಾತಿಗೆ ತಪ್ಪಲ್ಲ. ರಾಜ್ಯದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ. ನಾನೇ ಸಿಎಂ ಆಗಿಯೂ ಮುಂದುವರಿಯುತ್ತೇನೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು. ಶಾಸಕರು ಹೇಳಿಕೆ ಕೊಡುತ್ತಿರುವುದರಿಂದ ಗೊಂದಲಕ್ಕೆ ಕಾರಣವಾಗುತ್ತಿದೆ ಎಂಬ ಪ್ರಶ್ನೆಗೆ, ಅದಕ್ಕೆ ಹೈಕಮಾಂಡ್ ಸೂಚನೆ ನೀಡಲಿದೆ. ಹೈಕಮಾಂಡ್ ಸೂಚನೆಯನ್ನು ನಾನು ಆದಿಯಾಗಿ ಎಲ್ಲರೂ ಪಾಲನೆ ಮಾಡಬೇಕು ಎಂದರು.
Amid intense political activity and speculation over a possible change in leadership in Karnataka, Chief Minister Siddaramaiah on Friday made a strong and surprising statement. Addressing questions on leadership change and cabinet expansion, he clarified that such decisions ultimately lie with the party’s high command, and leaders abide by their directions.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm