ಬ್ರೇಕಿಂಗ್ ನ್ಯೂಸ್
24-11-25 09:55 pm Bangalore Correspondent ಕರ್ನಾಟಕ
ಬೆಂಗಳೂರು, ನ.24 : ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು. ಹುದ್ದೆಯಲ್ಲಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷವನ್ನು ತಲುಪಿದ ನಂತರ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ 'ಅಧಿಕಾರ ಹಂಚಿಕೆ' ಒಪ್ಪಂದದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ವದಂತಿ ನಡುವೆ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.
'ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ನಾನೇ ಇರಬೇಕೆಂದು ನಿರ್ಧರಿಸಿದರೆ, ನಾನು ಮುಂದುವರಿಯುತ್ತೇನೆ. ಅಂತಿಮವಾಗಿ, ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ, ಅದನ್ನು ನಾವು ಒಪ್ಪಿಕೊಳ್ಳಬೇಕು. ಶಿವಕುಮಾರ್ ಕೂಡ ಒಪ್ಪಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ಕೇಳಿದಾಗ, 'ಆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ನಾನು ಹೇಳಿದರೂ, ನೀವು ಮತ್ತೆ ಅದೇ ವಿಷಯವನ್ನು ಏಕೆ ಕೇಳುತ್ತಿದ್ದೀರಿ ಎಂದು ಗರಂ ಆದರು. ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದ ಸಿಎಂ, 'ಈಗ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಅನುಸರಿಸುತ್ತೇವೆ ಎಂದು ಹೇಳಿದರು.
ಎರಡೂವರೆ ವರ್ಷಗಳಿಗೆ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಿದಾಗ, 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ' ಎಂದಷ್ಟೇ ಹೇಳಿದರು.
Chief Minister Siddaramaiah said on Monday that any decision regarding a change in leadership will be made by the Congress High Command. He added, “Whatever decision the High Command takes, both I and D.K. Shivakumar must accept it. If the High Command decides that I should continue in the post, I will continue.”
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm