ಬ್ರೇಕಿಂಗ್ ನ್ಯೂಸ್
24-11-25 09:55 pm Bangalore Correspondent ಕರ್ನಾಟಕ
ಬೆಂಗಳೂರು, ನ.24 : ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು. ಹುದ್ದೆಯಲ್ಲಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷವನ್ನು ತಲುಪಿದ ನಂತರ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ 'ಅಧಿಕಾರ ಹಂಚಿಕೆ' ಒಪ್ಪಂದದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ವದಂತಿ ನಡುವೆ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.
'ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ನಾನೇ ಇರಬೇಕೆಂದು ನಿರ್ಧರಿಸಿದರೆ, ನಾನು ಮುಂದುವರಿಯುತ್ತೇನೆ. ಅಂತಿಮವಾಗಿ, ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ, ಅದನ್ನು ನಾವು ಒಪ್ಪಿಕೊಳ್ಳಬೇಕು. ಶಿವಕುಮಾರ್ ಕೂಡ ಒಪ್ಪಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ಕೇಳಿದಾಗ, 'ಆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ನಾನು ಹೇಳಿದರೂ, ನೀವು ಮತ್ತೆ ಅದೇ ವಿಷಯವನ್ನು ಏಕೆ ಕೇಳುತ್ತಿದ್ದೀರಿ ಎಂದು ಗರಂ ಆದರು. ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದ ಸಿಎಂ, 'ಈಗ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಅನುಸರಿಸುತ್ತೇವೆ ಎಂದು ಹೇಳಿದರು.
ಎರಡೂವರೆ ವರ್ಷಗಳಿಗೆ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಿದಾಗ, 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ' ಎಂದಷ್ಟೇ ಹೇಳಿದರು.
Chief Minister Siddaramaiah said on Monday that any decision regarding a change in leadership will be made by the Congress High Command. He added, “Whatever decision the High Command takes, both I and D.K. Shivakumar must accept it. If the High Command decides that I should continue in the post, I will continue.”
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm