ಬ್ರೇಕಿಂಗ್ ನ್ಯೂಸ್
27-11-25 12:49 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ನೇರ ಟಾಂಗ್ ಇಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ ಕೆಲವರು ಹೇಳುತ್ತಿದ್ದಾರೆ ಎಂದರು.
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು. ಸಿಎಲ್ ಪಿಯಲ್ಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಯಾರಾದರೂ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
2013ರಲ್ಲಿ ಪರಮೇಶ್ವರ್ ಪಕ್ಷವನ್ನು ಅಧಿಕಾರಕ್ಕೆ ತಂದರೂ, ದುರದೃಷ್ಟವಶಾತ್ ಅವರು ಸೋತರು. ಇವರು (ಡಿಕೆ ಶಿವಕುಮಾರ್) ಈಗ ಕೂಲಿ ಕೇಳುವವರು. ಆದರೆ ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ಲಾ? ಅವರದ್ದು ಹಳೆಯ ಕೂಲಿ, ಮೊದಲು ಅದು ಚುಕ್ತಾ ಆಗಲಿ. ಆಮೇಲೆ ಇವರ ವಿಚಾರ ನೋಡೋಣ ಎಂದರು.
ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದ್ದಾರೆ. ಅದಕ್ಕಾಗಿ ನಾನು ಮಾತನಾಡುವುದಿಲ್ಲ. ನನ್ನ ವೈಯಕ್ತಿಕ ಆಶಯ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕೆಂಬುದು. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಹೋಗೋಣ. ಆಗ ಬಹುಮತ ಪಡೆದು ಅವರೇ ಐದು ವರ್ಷ ಸಿಎಂ ಆಗಲಿ ಎಂದರು.
In the midst of growing leadership tensions in Karnataka Congress, MLA K.N. Rajanna has stirred fresh debate by suggesting that if leadership must change, the Assembly should be dissolved and elections should be held under DK Shivakumar’s leadership. He remarked that while DK Shivakumar is demanding his “turn,” G. Parameshwara also deserves his pending “dues” first.
27-11-25 12:56 pm
Bangalore Correspondent
ಡಿಕೆಶಿ ಮುಖ್ಯಮಂತ್ರಿಯಾದರೆ ಒಪ್ಪಿಕೊಳ್ಳುತ್ತೇವೆ ; ಮ...
27-11-25 12:55 pm
ಡಿಕೆಶಿ ಬೆಂಬಲ ಕೇಳಿದರೆ ಬಿಜೆಪಿ ಸರ್ಕಾರ ನಡೆಸಲು ಸಿದ...
27-11-25 12:52 pm
ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ವಾ? ಅವರದ್ದು ಮೊದಲ...
27-11-25 12:49 pm
ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಕೊಟ್ಟ...
27-11-25 11:55 am
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm