ಬ್ರೇಕಿಂಗ್ ನ್ಯೂಸ್
27-11-25 04:27 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : 140 ಶಾಸಕರನ್ನು ಹೊಂದಿದ್ದರೂ ಕಾಂಗ್ರೆಸಿಗೆ ಸುಗಮ ಆಡಳಿತ ನಡೆಸಲು ಸಾಧ್ಯವಿಲ್ಲ ಎಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲೆಸೆದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರು ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಕಾತರದಿಂದ ಕಾಯುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆ ಜೋಳ, ಭತ್ತ ಬೆಳೆಯುವ ರೈತರಿಗೆ ಸರಕಾರವು ಪರಿಹಾರ ಕೊಡುವುದಾಗಿ ರೈತರು ಕಾಯುತ್ತಿದ್ದಾರೆ. ಅಡಿಕೆ ಬೆಳೆಗಾರರೂ ಸಂಕಷ್ಟದಲ್ಲಿದ್ದು, ಈ ಸರ್ಕಾರವು ಇದ್ಯಾವುದಕ್ಕೂ ಪರಿಹಾರ ನೀಡುವ ಲಕ್ಷಣ ಕಾಣುತ್ತಿಲ್ಲ ಎಂದು ಎಂದರು.
ಆಡಳಿತ ನಡೆಸಲು ಸಾಧ್ಯವಿದ್ದರೆ ನಡೆಸಿ, ಇದೇ ರೀತಿ ಕಿತ್ತಾಟ ಮಾಡಿಕೊಂಡು ದೆಹಲಿಯಲ್ಲಿ ನಾಲ್ಕು ದಿನ, ಬೆಂಗಳೂರಿನಲ್ಲಿ 3 ದಿನ ಇರುವುದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಆಗ್ರಹಿಸಿದರು.
ಇವರು ಬೀದಿಗಿಳಿದು ಬಡಿಗೆ ತೆಗೆದುಕೊಂಡು ಹೊಡೆದಾಡುವ ಸನ್ನಿವೇಶ ಸೃಷ್ಟಿಯಾಗಿದೆ. ಅವರು ಹೊಡೆದಾಡಿಕೊಂಡರೆ ನಾವೇನು ಮಾಡಬೇಕೆಂದು ಯೋಚಿಸುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇದರ ನಡುವೆ ಕಬ್ಬು ಬೆಳೆಗಾರರು, ತೊಗರಿ, ಹುರುಳಿ ಬೆಳೆಗಾರರು ಸೇರಿ ರೈತರು ಸಂಕಷ್ಟದಲ್ಲಿದ್ದಾರೆ. ಮೆಕ್ಕೆಜೋಳ, ಭತ್ತ ಬೆಳೆಯುವ ರೈತರು ಖರೀದಿ ಕೇಂದ್ರ ಪ್ರಾರಂಭಿಸಲು ಬೊಬ್ಬೆ ಹೊಡೆಯುತ್ತಿದ್ದಾರೆ. ಪಾಪ, ಮುಖ್ಯಮಂತ್ರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸಮಯ ಸಿಗುತ್ತಿಲ್ಲ.
ನಮ್ಮ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಲ್ಲಿ ನಮಗೆ ಆಸಕ್ತಿ ಇಲ್ಲ, ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಆಗಲೀ, ಮತ್ಯಾರಾದರೂ ಹೊರಗೆ ಬಂದರೆ ಅವರಿಗೆ ಬಾಹ್ಯ ಬೆಂಬಲ ಕೊಡುವುದಾಗಲೀ ಅಥವಾ ಬೆಂಬಲ ಪಡೆಯುವುದಾಗಲೀ ಪ್ರಶ್ನೆ ಉದ್ಭವವಾಗುವುದಿಲ್ಲ. ಮತದಾರರು ನಮ್ಮನ್ನು ವಿಪಕ್ಷವಾಗಿ ಕೂರಿಸಿದ್ದಾರೆ. ವಿಪಕ್ಷವಾಗಿ ಜವಾಬ್ದಾರಿಯುತ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅದರ ಬಗ್ಗೆ ಚರ್ಚೆ ಮಾಡುವ ಪ್ರಶ್ನೆ ಇಲ್ಲ ಎಂದರು.
BJP state president B.Y. Vijayendra has issued a sharp challenge to the ruling Congress, stating that despite having 140 MLAs, the party is failing to run the government smoothly. He urged the Congress to dissolve the Karnataka Legislative Assembly and face fresh elections if internal conflicts continue to paralyze administration.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am