ಬ್ರೇಕಿಂಗ್ ನ್ಯೂಸ್
28-11-25 10:37 pm Bangalore Correspondent ಕರ್ನಾಟಕ
ಬೆಂಗಳೂರು, ನ.28 : ಮುಖ್ಯಮಂತ್ರಿ ಪಟ್ಟದ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಡಿಕೆ ಶಿವಕುಮಾರ್ ಅವರನ್ನು ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸಕ್ಕೆ ಮಾತುಕತೆಗೆ ಕರೆದಿದ್ದಾರೆ.
ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ, ಶನಿವಾರ ಬೆಳಗ್ಗೆ 9.30ಕ್ಕೆ ಕಾವೇರಿ ನಿವಾಸಕ್ಕೆ ಬನ್ನಿ ಎಂದು ಹೇಳಿದ್ದಾರೆ. ಸಿಎಂ ಆಹ್ವಾನ ಒಪ್ಪಿರುವ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಲಿದ್ದು ಉಭಯ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ.
ಶನಿವಾರ ಸಂಜೆಯೇ ದೆಹಲಿಗೆ ತೆರಳಲು ಡಿಕೆಶಿ ತಯಾರಾಗಿದ್ದರು. ಇದಕ್ಕಾಗಿ ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ದೆಹಲಿ ನಾಯಕರು ನೋ ಎಂದಿದ್ದು ನೀವೇ ಒಂದು ನಿರ್ಧಾರಕ್ಕೆ ಬನ್ನಿ ಎಂದು ಇಬ್ಬರು ನಾಯಕರಿಗೂ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಡಿಕೆಶಿ ಅವರನ್ನು ಮಾತುಕತೆಗೆ ಕರೆದಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ನವರು ನನಗೆ ಮತ್ತು ಡಿಕೆ ಶಿವಕುಮಾರ್ ಗೆ ಕರೆ ಮಾಡಿದ್ದರು. ಇಬ್ಬರು ಕುಳಿತು ಮಾತಾಡಿ ಎಂದಿದ್ದಾರೆ. ಹೈಕಮಾಂಡ್ ಏನು ಹೇಳುತ್ತೆ ಅದನ್ನು ಕೇಳುತ್ತೇನೆ. ಹೈಕಮಾಂಡ್ ನಾಯಕರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಆದರೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಶುಕ್ರವಾರ ಸಂಜೆ 7:45ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲು ಫ್ಲೈಟ್ ಬುಕ್ ಮಾಡಿದ್ದರು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ಮುಂದೂಡಿದ್ದಾರೆ. ಇದೇ ವೇಳೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಶನಿವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದು ಆನಂತರವೇ ದೆಹಲಿ ವಿಮಾನ ಹತ್ತಲಿದ್ದಾರೆ.
The tussle for the Chief Minister’s position in Karnataka has reached its decisive stage. CM Siddaramaiah has personally called Deputy CM DK Shivakumar for a crucial meeting at his residence on Saturday morning at 9:30 AM, following instructions from the Congress high command.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm