ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm