ಬ್ರೇಕಿಂಗ್ ನ್ಯೂಸ್
01-12-25 02:58 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01 : ನಾನು ಹಾಗೂ ಸಿಎಂ ಸಿದ್ದರಾಮಯ್ಯ ಸಹೋದರರ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ಬ್ರೇಕ್ ಫಾಸ್ಟ್ ಗೆ ಸಿಎಂಗೆ ಆಹ್ವಾನ ವಿಚಾರಕ್ಕೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರನ್ನು ಮಂಗಳವಾರ ಉಪಹಾರಕ್ಕೆ ಆಹ್ವಾನ ನೀಡಿದ್ದೇನೆ. ಅದು ನನಗೂ, ಸಿಎಂಗೂ ಸಂಬಂಧಿಸಿದ ವಿಚಾರ. ನಾವಿಬ್ಬರು ಬ್ರದರ್ಸ್ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದೇವೆ. ನಮ್ಮಲ್ಲಿ ಸಿದ್ದರಾಮಯ್ಯ ಗುಂಪು ಡಿಕೆ ಗುಂಪು ಅಂತ ಯಾವುದೂ ಇಲ್ಲ, ನಾವೆಲ್ಲರೂ ಪಕ್ಷಕ್ಕಾಗಿ ದುಡಿತಾಯಿದ್ದೀವಿ ಅಷ್ಟೇ ಎಂದರು.
ನನ್ನ ಜೊತೆಗೆ 140 ಶಾಸಕರಿದ್ದಾರೆ:
ಮಂಗಳವಾರ ಡಿಕೆ ಶಿವಕುಮಾರ್ ನಿವಾಸದಲ್ಲಿ ನಡೆಯಲಿರುವ ಬ್ರೇಕ್ ಫಾಸ್ಟ್ ಸಭೆಯಲ್ಲಿ ಪಕ್ಷದ ಗೊಂದಲಗಳ ಜತೆಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ತಿರ್ಮಾನ ಆಗುವ ಸಾಧ್ಯತೆ ಇದೆ. ಇಂದಿದಿಂದ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ. ಸಂಸತ್ ನಲ್ಲಿ ರಾಜ್ಯದ ವಿಚಾರಗಳನ್ನು ಪ್ರಸ್ತಾಪಿಸಿ ಕೇಂದ್ರದ ಗಮನಕ್ಕೆ ತರಲು ನಿಯೋಗ ಕೊಂಡೊಯ್ಯುವ ಸಾಧ್ಯತೆ ಇದೆ.
ಈ ವಾರದಲ್ಲೇ ದೆಹಲಿಗೆ ಸಿಎಂ ಡಿಸಿಎಂ ಹೋಗಲಿದ್ದು, ಸರ್ವಪಕ್ಷ ಸಭೆ ನಡೆಸಲಿದ್ದಾರೆ. ರಾಜ್ಯದ ಎಲ್ಲ ಸಂಸದರ ಜತೆ ಚರ್ಚೆ ನಡೆಸಿ ಕೇಂದ್ರಕ್ಕೂ ಮನವಿ ಕೊಡುವ ಸಾಧ್ಯತೆ ಇದೆ. ದೆಹಲಿಗೆ ಹೋದಾಗ ಹೈಕಮಾಂಡ್ ನಾಯಕರನ್ನೂ ಸಿಎಂ-ಡಿಸಿಎಂ ಭೇಟಿ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ. ಈ ವೇಳೆ ಇಬ್ಬರ ನಡುವಿನ ಒಮ್ಮತ ಬಗ್ಗೆ ವರಿಷ್ಠರಿಗೆ ಮಾಹಿತಿ ಕೊಡಲಿದ್ದಾರೆ. ಶೀಘ್ರದಲ್ಲೇ ಗೊಂದಲ ಬಗೆಹರಿಸಲೂ ಮನವಿ ಮಾಡುವ ಸಾಧ್ಯತೆ ದಟ್ಟವಾಗಿದೆ. ನನ್ನ ಜೊತೆಗೆ 140 ಮಂದಿ ಶಾಸಕರು ಇದ್ದಾರೆ. ಹುಟ್ಟುವಾಗ ಒಬ್ಬರೆ ಹುಟ್ಟುತ್ತೇವೆ, ಸಾಯುವಾಗ ಒಬ್ಬರೇ ಸಾಯುತ್ತೇವೆ. ಪಾರ್ಟಿ ಎಂದ ಮೇಲೆ ಎಲ್ಲರೂ ಜೊತೆಗೆ ತೆಗೆದುಕೊಂಡು ಹೋಗಬೇಕು. ನೀವು ಅದರ ಬಗ್ಗೆ ಚಿಂತೆ ಮಾಡಬೇಡಿ ಎಂದರು. ಮಾಧ್ಯಮಗಳಲ್ಲಿ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇದೆ ಎಂದು ಪದೇ ಪದೇ ತೋರಿಸಲಾಗುತ್ತಿತ್ತು. ಅದಕ್ಕೆ ನಾವು ಬ್ರೇಕ್ ಫಾಸ್ಟ್ ಗೆ ಸೇರಬೇಕಾಯ್ತು ಎಂದರು.
ಹೈಕಮಾಂಡ್ನತ್ತ ಬೊಟ್ಟು;
ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷಕ್ಕಾಗಿ ಒಗ್ಗಟ್ಟಿನ ಹೋರಾಟ ಮಾಡ್ತಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದು ಸಿಎಂ ಹಾಗೂ ಡಿಸಿಎಂ ಹೇಳ್ತಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಬಂದ್ರೆ ಇಬ್ಬರು ನಾಯಕರು ಹೈಕಮಾಂಡ್ನತ್ತ ಬೊಟ್ಟು ಮಾಡ್ತಿದ್ದಾರೆ. ಹೈಕಮಾಂಡ್ ನಿರ್ಧಾರವೇ ಫೈನಲ್ ಎನ್ನುತ್ತಿದ್ದಾರೆ.
Deputy Chief Minister DK Shivakumar clarified that he and Chief Minister Siddaramaiah share a brother-like relationship and dismissed speculation about factionalism within the Congress party. Speaking at Vidhana Soudha on Monday, he responded to questions regarding inviting the CM for breakfast, saying, “I have invited Chief Minister Siddaramaiah for breakfast on Tuesday.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm