ಬ್ರೇಕಿಂಗ್ ನ್ಯೂಸ್
01-12-25 02:58 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01 : ನಾನು ಹಾಗೂ ಸಿಎಂ ಸಿದ್ದರಾಮಯ್ಯ ಸಹೋದರರ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ಬ್ರೇಕ್ ಫಾಸ್ಟ್ ಗೆ ಸಿಎಂಗೆ ಆಹ್ವಾನ ವಿಚಾರಕ್ಕೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರನ್ನು ಮಂಗಳವಾರ ಉಪಹಾರಕ್ಕೆ ಆಹ್ವಾನ ನೀಡಿದ್ದೇನೆ. ಅದು ನನಗೂ, ಸಿಎಂಗೂ ಸಂಬಂಧಿಸಿದ ವಿಚಾರ. ನಾವಿಬ್ಬರು ಬ್ರದರ್ಸ್ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದೇವೆ. ನಮ್ಮಲ್ಲಿ ಸಿದ್ದರಾಮಯ್ಯ ಗುಂಪು ಡಿಕೆ ಗುಂಪು ಅಂತ ಯಾವುದೂ ಇಲ್ಲ, ನಾವೆಲ್ಲರೂ ಪಕ್ಷಕ್ಕಾಗಿ ದುಡಿತಾಯಿದ್ದೀವಿ ಅಷ್ಟೇ ಎಂದರು.
ನನ್ನ ಜೊತೆಗೆ 140 ಶಾಸಕರಿದ್ದಾರೆ:
ಮಂಗಳವಾರ ಡಿಕೆ ಶಿವಕುಮಾರ್ ನಿವಾಸದಲ್ಲಿ ನಡೆಯಲಿರುವ ಬ್ರೇಕ್ ಫಾಸ್ಟ್ ಸಭೆಯಲ್ಲಿ ಪಕ್ಷದ ಗೊಂದಲಗಳ ಜತೆಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ತಿರ್ಮಾನ ಆಗುವ ಸಾಧ್ಯತೆ ಇದೆ. ಇಂದಿದಿಂದ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ. ಸಂಸತ್ ನಲ್ಲಿ ರಾಜ್ಯದ ವಿಚಾರಗಳನ್ನು ಪ್ರಸ್ತಾಪಿಸಿ ಕೇಂದ್ರದ ಗಮನಕ್ಕೆ ತರಲು ನಿಯೋಗ ಕೊಂಡೊಯ್ಯುವ ಸಾಧ್ಯತೆ ಇದೆ.
ಈ ವಾರದಲ್ಲೇ ದೆಹಲಿಗೆ ಸಿಎಂ ಡಿಸಿಎಂ ಹೋಗಲಿದ್ದು, ಸರ್ವಪಕ್ಷ ಸಭೆ ನಡೆಸಲಿದ್ದಾರೆ. ರಾಜ್ಯದ ಎಲ್ಲ ಸಂಸದರ ಜತೆ ಚರ್ಚೆ ನಡೆಸಿ ಕೇಂದ್ರಕ್ಕೂ ಮನವಿ ಕೊಡುವ ಸಾಧ್ಯತೆ ಇದೆ. ದೆಹಲಿಗೆ ಹೋದಾಗ ಹೈಕಮಾಂಡ್ ನಾಯಕರನ್ನೂ ಸಿಎಂ-ಡಿಸಿಎಂ ಭೇಟಿ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ. ಈ ವೇಳೆ ಇಬ್ಬರ ನಡುವಿನ ಒಮ್ಮತ ಬಗ್ಗೆ ವರಿಷ್ಠರಿಗೆ ಮಾಹಿತಿ ಕೊಡಲಿದ್ದಾರೆ. ಶೀಘ್ರದಲ್ಲೇ ಗೊಂದಲ ಬಗೆಹರಿಸಲೂ ಮನವಿ ಮಾಡುವ ಸಾಧ್ಯತೆ ದಟ್ಟವಾಗಿದೆ. ನನ್ನ ಜೊತೆಗೆ 140 ಮಂದಿ ಶಾಸಕರು ಇದ್ದಾರೆ. ಹುಟ್ಟುವಾಗ ಒಬ್ಬರೆ ಹುಟ್ಟುತ್ತೇವೆ, ಸಾಯುವಾಗ ಒಬ್ಬರೇ ಸಾಯುತ್ತೇವೆ. ಪಾರ್ಟಿ ಎಂದ ಮೇಲೆ ಎಲ್ಲರೂ ಜೊತೆಗೆ ತೆಗೆದುಕೊಂಡು ಹೋಗಬೇಕು. ನೀವು ಅದರ ಬಗ್ಗೆ ಚಿಂತೆ ಮಾಡಬೇಡಿ ಎಂದರು. ಮಾಧ್ಯಮಗಳಲ್ಲಿ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇದೆ ಎಂದು ಪದೇ ಪದೇ ತೋರಿಸಲಾಗುತ್ತಿತ್ತು. ಅದಕ್ಕೆ ನಾವು ಬ್ರೇಕ್ ಫಾಸ್ಟ್ ಗೆ ಸೇರಬೇಕಾಯ್ತು ಎಂದರು.
ಹೈಕಮಾಂಡ್ನತ್ತ ಬೊಟ್ಟು;
ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷಕ್ಕಾಗಿ ಒಗ್ಗಟ್ಟಿನ ಹೋರಾಟ ಮಾಡ್ತಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದು ಸಿಎಂ ಹಾಗೂ ಡಿಸಿಎಂ ಹೇಳ್ತಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಬಂದ್ರೆ ಇಬ್ಬರು ನಾಯಕರು ಹೈಕಮಾಂಡ್ನತ್ತ ಬೊಟ್ಟು ಮಾಡ್ತಿದ್ದಾರೆ. ಹೈಕಮಾಂಡ್ ನಿರ್ಧಾರವೇ ಫೈನಲ್ ಎನ್ನುತ್ತಿದ್ದಾರೆ.
Deputy Chief Minister DK Shivakumar clarified that he and Chief Minister Siddaramaiah share a brother-like relationship and dismissed speculation about factionalism within the Congress party. Speaking at Vidhana Soudha on Monday, he responded to questions regarding inviting the CM for breakfast, saying, “I have invited Chief Minister Siddaramaiah for breakfast on Tuesday.
01-12-25 03:03 pm
HK News Desk
CM Siddaramaiah, DK Shivakumar: ನಾನು ಸಿಎಂ ಬ್ರ...
01-12-25 02:58 pm
Red Fort Blast Alert: ಕೆಂಪುಕೋಟೆ ಬ್ಲಾಸ್ಟ್ ಹಿನ್...
01-12-25 01:08 pm
ನಂದಿನಿ ನಕಲಿ ತುಪ್ಪದ ಜಾಲ ; ಕಡಿವಾಣಕ್ಕೆ ಕೆಎಂಎಫ್ ಮ...
29-11-25 08:11 pm
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
01-12-25 03:08 pm
Mangalore Correspondent
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm