ಬ್ರೇಕಿಂಗ್ ನ್ಯೂಸ್
02-12-25 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2 : ಸಂಪುಟ ಪುನಾರಚನೆಯಾದರೆ ಸಚಿವರಾಗಿರುವ ಮುನಿಯಪ್ಪ, ಮಹದೇವಪ್ಪ, ಪರಮೇಶ್ವರ್ ಎಲ್ಲರಿಗೂ ಕೂಡ ಕೊಕ್ ಸಿಗಲಿದೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ, ಡಿಸಿಎಂ 2ನೇ ಬ್ರೇಕ್ ಫಾಸ್ಟ್ ವಿಚಾರದ ಬಗ್ಗೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡಿಕೆಶಿ ಯಾವತ್ತೂ ಕೂಡ ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಿದ್ದವರಲ್ಲ. ಸಿದ್ದರಾಮಯ್ಯ ಕೂಡ ಯಾವತ್ತೂ ಡಿಕೆಶಿಗೆ ಮನೆಗೆ ಹೋಗಿಲ್ಲ. ಅಧಿಕಾರದ ಆಸೆಯಿಂದ ಸಿಎಂ ಸ್ಥಾನ ಉಳಿಸಿಕೊಳ್ಳಬೇಕು ಅಂತ ಅವರ ಮನೆಗೆ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬ್ರೇಕ್ ಫಾಸ್ಟ್ ನೆಪಮಾತ್ರ. ಮನಸ್ಸುಗಳೇ ಬ್ರೇಕ್ ಆಗಿರುವಾಗ ಬ್ರೇಕ್ ಫಾಸ್ಟ್ ತೇಪೆ ಹಚ್ಚುತ್ತಾ ಹೇಳಿ? ಇವರೇನು ರಾಜ್ಯದ ಅಭಿವೃದ್ಧಿ ಚಿಂತಿಸಲು ಸೇರಿದ್ದರಾ, ದಲಿತರ ಸಮಸ್ಯೆ, ರೈತರ ಸಮಸ್ಯೆ ಬಗೆಹರಿಸಲು ಏನಾದ್ರೂ ಸೇರಿದ್ದಾರಾ? ಬ್ರೇಕ್ ಫಾಸ್ಟ್, ಪಾರ್ಟಿ ಮಾಡಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.
ಹಿಂದೆ ಡಿಕೆಶಿ ತಾಯಿ ಮಾತನಾಡಿದ್ದ ವಿಡಿಯೋ ಬಗ್ಗೆ ಪ್ರಸ್ತಾಪಿಸಿದರು. ಡಿಕೆಶಿ ಒಂದು ಹೇಳಿಕೆ ಕೊಟ್ಟಿದ್ದಾರೆ, ನಾವಿಬ್ಬರೂ ಬ್ರದರ್ಸ್ ಅಂತ ಹೇಳಿದ್ದಾರೆ. ಕುಕ್ಕರ್ ಬ್ಲಾಸ್ಟ್ ಹಾಗೂ ಬೆಂಗಳೂರಿನಲ್ಲಿ ಬೇರೆ ಕೃತ್ಯ ಎಸಗಿದವರನ್ನು ಬ್ರದರ್ಸ್ ಅಂತಾ ಹೇಳಿದ್ದಾರೆ. ನನಗೆ ಗೊತ್ತಿರುವ ಹಾಗೆ ಅವರ ಬ್ರದರ್ ಡಿಕೆ ಸುರೇಶ್ ಅಷ್ಟೇ. ಕಾಂಗ್ರೆಸ್ನಲ್ಲಿ ದಲಿತರಿಗೆ ಕುರ್ಚಿ ಇಲ್ಲ ಅಂತ ಸಾಬೀತಾಗಿದೆ. ದಲಿತರ ಸಮಾಧಿಯನ್ನು ಕಾಂಗ್ರೆಸ್ ಪಾರ್ಟಿ ಸಂಪೂರ್ಣ ಕಟ್ಟಿ ಆಗಿದೆ. ಸಂಪುಟ ಪುನರ್ ರಚನೆಯಾದರೆ ಸಂಪುಟದಿಂದ ದಲಿತ ನಾಯಕರಾದ ಪರಮೇಶ್ವರ್, ಮಹದೇವಪ್ಪ ಹಾಗೂ ಮುನಿಯಪ್ಪ ಮೂವರು ಕೂಡ ಔಟ್ ಆಗುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಇನ್ನೊಬ್ಬ ದಲಿತರನ್ನು ಸಿಎಂ ಆಗಲೂ ಬಿಡಲ್ಲ. ಸಿಎಂ ಆದ್ರೆ ಪ್ರಿಯಾಂಕ್ ಖರ್ಗೆಗೆ ಮಾತ್ರ ಅವಕಾಶ ಕೊಡುತ್ತಾರೆ ಎಂದು ಹರಿಹಾಯ್ದರು.
ಸಂಪುಟದಿಂದ ಪ್ರಿಯಾಂಕ್ ಖರ್ಗೆಯವರನ್ನು ಸಿಎಂ ಅಥವಾ ಡಿಸಿಎಂ ಮಾಡುತ್ತಾರೆ. ಎಐಸಿಸಿಯೇ ಹೈಕಮಾಂಡ್, ಆದ್ರೆ ನಾನು ಈ ಕುರ್ಚಿ ಕಿತ್ತಾಟ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇನೆ ಅಂತ ಖರ್ಗೆ ಹೇಳುತ್ತಾರೆ. ಕಾಂಗ್ರೆಸ್ ಪಾರ್ಟಿಯಂತ ಕೆಟ್ಟ ಪಾರ್ಟಿ ಮತ್ತೊಂದು ಇಲ್ಲ. ಕಾಂಗ್ರೆಸ್ ಪಾರ್ಟಿ ಸರ್ವನಾಶ ಆದ್ರೆ ಅಷ್ಟೇ ಸಾರ್ವಜನಿಕರು ಉದ್ಧಾರ ಆಗುತ್ತಾರೆ ಎಂದರು.
Leader of the Opposition Chalavadi Narayanaswamy claimed that Dalit ministers K. Muniyappa, H.C. Mahadevappa and G. Parameshwara will be removed if the Karnataka cabinet is reshuffled. Speaking in Kollegala, he criticised Chief Minister Siddaramaiah and Deputy CM D.K. Shivakumar, alleging political power struggle, lack of concern for governance, and discrimination against Dalit leaders within the Congress.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm