ಬ್ರೇಕಿಂಗ್ ನ್ಯೂಸ್
02-12-25 10:17 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2 : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಇಮೇಲ್ ವಿಳಾಸಕ್ಕೆ 'ಜೈಷ್-ಇ-ಮೊಹಮ್ಮದ್' ಹೆಸರಲ್ಲಿ ಶಾಪಿಂಗ್ ಮಾಲ್ ಮತ್ತು ಏರ್ಪೋರ್ಟ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಶಾಪಿಂಗ್ ಮಾಲ್ಗಳನ್ನು ಗುರಿಯಾಗಿಸಿ ಬೆದರಿಕೆ ಸಂದೇಶ ರವಾನೆಯಾಗಿದೆ. ನವೆಂಬರ್ 30, 2025 ರಂದು ಬೆಳಗ್ಗೆ 11.53ಕ್ಕೆ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಅನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧಿಕೃತ ಇ-ಮೇಲ್ಗೆ ಕಳುಹಿಸಲಾಗಿದೆ.
ಬೆದರಿಕೆ ಹಾಕಿದ ವ್ಯಕ್ತಿ ತನ್ನನ್ನು 'ಜೈಷ್-ಇ ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್' ಎಂದು ಪರಿಚಯಿಸಿ ಇಂಗ್ಲಿಷ್ನಲ್ಲಿ ಸಂದೇಶ ಬರೆದಿದ್ದಾನೆ. ಜೈಷ್-ಇ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್ನಿಂದ ಇದೊಂದು ಎಚ್ಚರಿಕೆ. ನಾವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಒರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್, ಮಂತ್ರಿ ಸ್ಕ್ವೇರ್ ಮಾಲ್ ಗಳನ್ನು ಗುರಿಯಾಗಿಸಿಕೊಂಡಿದ್ದೇವೆ. ಸಂಜೆ 7 ಗಂಟೆಯ ನಂತರ ಬಾಂಬ್ ಸ್ಫೋಟಗೊಳ್ಳಲಿದೆ. ನಮ್ಮ ಅಲ್ಲಾ ಮತ್ತು ನಮ್ಮ ಮಾಸ್ಟರ್ ಮೋಹಿತ್ ಅವರಿಗೆ ಧನ್ಯವಾದಗಳು. ಅಲ್ಲದೆ, 'ಇದು ಸಂಭವಿಸದಿರಲು ಬಯಸಿದರೆ ನೀವು +91 936***8077 ಸಂಖ್ಯೆಗೆ ಕರೆ ಮಾಡಿ, ಹಣವನ್ನು ಪಾವತಿ ಮಾಡಿ ಎಂದು ಹಣಕ್ಕೆ ಬೇಡಿಕೆ ಇಡುವ ಪ್ರಯತ್ನವನ್ನೂ ಮಾಡಲಾಗಿದೆ.
ಬೆದರಿಕೆ ಇ-ಮೇಲ್ ಅನ್ನು ಮೋಹಿತ್ ಕುಮಾರ್ ಹೆಸರಿನ ಇಮೇಲ್ ಐಡಿ ಮೂಲಕ ರವಾನಿಸಲಾಗಿದೆ. ಸಂದೇಶವು ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು, ವಿಮಾನ ನಿಲ್ದಾಣ ಮತ್ತು ಹೆಸರಿಸಲಾದ ಮಾಲ್ಗಳ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಸ್ಥಳಗಳನ್ನು ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.
ಈ ಬಗ್ಗೆ ಬೆಂಗಳೂರಿನ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇ-ಮೇಲ್ ಐಡಿಯಲ್ಲಿ ಉಲ್ಲೇಖಿಸಲಾದ 'ಮೋಹಿತ್ ಕುಮಾರ್' ಎಂಬಾತನೇ ಆರೋಪಿಯೇ ಅಥವಾ ಬೇರೆ ಯಾರೋ ಈ ಐಡಿ ಬಳಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A hoax email sent to the Bengaluru City Police Commissioner’s official address threatened bomb blasts at Kempegowda International Airport and major shopping malls in the city, claiming to be from the “Jaish-e-Mohammed White Collar Terror Team.” The email, sent on November 30, 2025, warned of explosions after 7 PM and even demanded money via a phone number.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm