ಬ್ರೇಕಿಂಗ್ ನ್ಯೂಸ್
05-12-25 10:00 pm HK News Desk ಕರ್ನಾಟಕ
ಶಿವಮೊಗ್ಗ, ಡಿ.5 : ವೈದ್ಯೆಯಾಗಿದ್ದ ತಾಯಿ ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್ರೂಮ್ಗಳಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ನಗರದ ಅಶ್ವತ್ಥ ಬಡಾವಣೆಯಲ್ಲಿ ನಡೆದಿದೆ.
ತಾಯಿ ಡಾ.ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು. ಜಯಶ್ರೀ ಶಿವಮೊಗ್ಗದ ಹೊಮ್ಮರಡಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞೆಯಾಗಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ಬರೆದಿಟ್ಟ ತಾಯಿ
ಆತ್ಮಹತ್ಯೆಗೂ ಮೊದಲು ತಾಯಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದನ್ನು ನೋಡಿ ಮಗ ಆಕಾಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂರು ವರ್ಷದ ಹಿಂದೆಯಷ್ಟೇ ಆಕಾಶ್ನ ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಮಗ ಆಘಾತಕ್ಕೆ ಒಳಗಾಗಿದ್ದ. ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲಗಳ ಪ್ರಕಾರ, ಆಕಾಶ್ ರಿಯಲ್ ಎಸ್ಟೇಟ್ನಲ್ಲಿ ತಾನು ಹಣ ತೊಡಿಸಬೇಕು ಎಂದು ಅದಕ್ಕಾಗಿ ನನಗೆ ಹಣ ಬೇಕು ಎಂದು ಕೇಳುತ್ತಿದ್ದ ಎನ್ನಲಾಗುತ್ತಿದೆ. ಇದಕ್ಕೋಸ್ಕರನೇ ತಾಯಿ ಮತ್ತು ಮಗನ ಮಧ್ಯೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು. ಇದು ಇತ್ತೀಚಿಗೆ ಮದುವೆಯಾಗಿ ಬಂದ ನವ್ಯಗೆ ಕೂಡ ಮಾಮೂಲಾಗಿತ್ತು. ಆದರೆ ಈ ಜಗಳ ವಿಕೋಪಕ್ಕೆ ಹೋಗಿದ್ದು ಅದು ಈ ಆತ್ಮಹತ್ಯೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಮತ್ತೊಂದು ಮೂಲಗಳ ಪ್ರಕಾರ ಇಬ್ಬರಿಗೂ ಮೊದಲನೇ ಪತ್ನಿಯ ಸಾವಿನ ಭಯ, ಖಿನ್ನತೆ ಕಾಡುತ್ತಿತ್ತು ಎನ್ನಲಾಗುತ್ತಿದೆ. ಮೂಲತಃ ನ್ಯಾಮತಿಯ ನಿವಾಸಿಗಳಾದ ಹೊಮ್ಮರಡಿ ಕುಟುಂಬಕ್ಕೆ ಆಸ್ತಿಗೇನು ಕೊರತೆ ಇರಲಿಲ್ಲ 25 ಎಕರೆ ತೋಟ, ಇರಲು ಮನೆ, ಹೊಮ್ಮರಡಿ ಕಾಂಪ್ಲೆಕ್ಸ್ ಅದರ ಬಾಡಿಗೆ ಹಣ, ಹೊನ್ನಾಳಿಯಲ್ಲಿ ಸೈಟ್ಗಳು ಎಲ್ಲವೂ ಇದ್ದವು ಆದರೆ ಬಹು ಮುಖ್ಯವಾಗಿ ಬೇಕಾಗಿದ್ದ ಮಾನಸಿಕ ನೆಮ್ಮದಿ ಇರಲಿಲ್ಲ ಅದುವೇ ಈ ಆತ್ಮಹತ್ಯೆಗೆ ಕಾರಣವಾಗಿರಬಹುದು ಎನ್ನಲಾಗಿದೆ.
ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.
A tragic incident unfolded in Ashwatha Badavane, Shivamogga, where a well-known obstetrician, Dr. Jayashree (57), and her son Akash (32) died by suicide in separate bedrooms while Akash’s second wife was present in the house.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm