ಬ್ರೇಕಿಂಗ್ ನ್ಯೂಸ್
05-12-25 11:20 pm HK News Desk ಕರ್ನಾಟಕ
ಧಾರವಾಡ, ಡಿ 05 : ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ತಮ್ಮ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡ್ರ್ ಗೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ.
ಕಾರು ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.
ಇನ್ಸ್ಪೆಕ್ಟರ್ ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ. ಮೊನ್ನೆ ಅಷ್ಟೇ ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಬಲಿಯಾಗಿದ್ದಾರೆ.
A horrific accident occurred on the outskirts of Annigeri town in Dharwad district, where a car burst into flames after hitting a road divider, killing a Lokayukta Inspector who was trapped inside.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm