ಬ್ರೇಕಿಂಗ್ ನ್ಯೂಸ್
07-12-25 10:17 pm HK News Desk ಕರ್ನಾಟಕ
ಚಾಮರಾಜನಗರ, ಡಿ 07 : ಪಾದಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ್ದು, ವೃದ್ಧರು ಸೇರಿದಂತೆ 7 ಮಂದಿ ಗಂಭೀರ ಗಾಯಗೊಂಡ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. ಇದರಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಯಳಂದೂರು ಪಟ್ಟಣದ ಚೌಡಮ್ಮ, ವೈ.ಕೆ.ಮೋಳೆ ಗ್ರಾಮದ ಲಕ್ಷ್ಮಮ್ಮ, ಕೆ.ದೇವರಹಳ್ಳಿ ಗ್ರಾಮದ ರತ್ನಮ್ಮ ಸೇರಿದಂತೆ 7 ಮಂದಿ ಕೈ-ಕಾಲುಗಳಿಗೆ ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ ಪಾದಾಚಾರಿಗಳ ಮೇಲೆ ಎಗರಿಬಿದ್ದಿದೆ. ಅಲ್ಲದೇ, ಕಂಡಕಂಡವರ ಮೇಲೆ ದಾಳಿ ಮಾಡಿ ಪರಾರಿಯಾಗಿದೆ.
ಗಾಯಗೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ.
ಇನ್ನು ಬಾಗಲಕೋಟೆಯಲ್ಲಿ ಶಾಲೆಯಿಂದ ಮರಳುತ್ತಿದ್ದ 5 ವರ್ಷದ ಎಲ್ಕೆಜಿ ವಿದ್ಯಾರ್ಥಿನಿ ಮೇಲೆ ಬೀದ ನಾಯಿ ದಾಳಿ ಮಾಡಿದ ಘಟನೆ ನಡೆದಿದೆ. ಬಾಗಲಕೋಟೆ ನಗರದ ವಿದ್ಯಾಗಿರಿಯ ಬಳಿ ಘಟನೆ ನಡೆದಿದೆ. 5 ವರ್ಷದ ಮಗು ಅನನ್ಯಾ ತೆಗ್ಗಿ ಮೇಲೆ ಬೀದ ನಾಯಿಗಳು ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೊನ್ನೆ ದಾವರಣೆಗೆರೆಯಲ್ಲಿ ರಾಟ್ವೀಲರ್ ನಾಯಿ ದಾಳಿಗೆ ಮಹಿಳೆ ಅನಿತಾ ಎಂಬ ಮಹಿಳೆ ಬಲಿಯಾಗಿದ್ದಾರೆ. ದೇಹದ ಯಾವ ಭಾಗವನ್ನೂ ಬಿಡದೇ ನಾಯಿಗಳು ಕಚ್ಚಿ ಹಾಕಿತ್ತು. ಜನಸಾಮಾನ್ಯರ ದಿನನಿತ್ಯದ ಜೀವನವೇ ಆತಂಕದಲ್ಲಿ ಸಾಗುತ್ತಿದೆ. ಮನೆಗಳ ಮುಂದೆ, ಶಾಲಾ ಮಾರ್ಗಗಳಲ್ಲಿ, ಕಾಲೋನಿ ಬೀದಿಗಳಲ್ಲಿ, ಗಾರ್ಡನ್ಗಳಲ್ಲಿ-ಎಲ್ಲೆಡೆ ನಾಯಿಗಳ ಗುಂಪುಗಳು ಅಲೆದಾಡುತ್ತಿರುವುದು ಇದೀಗ ಸಾಮಾನ್ಯ ದೃಶ್ಯವಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ವಯೋವೃದ್ಧರು ಈ ದಾಳಿಗಳ ಪ್ರಮುಖ ಬಲಿಯಾಗುತ್ತಿರುವುದು ಪ್ರದೇಶದ ಪೋಷಕರಲ್ಲಿ ಹೊಸದೊಂದು ಭೀತಿಯನ್ನು ಹುಟ್ಟಿಸಿದೆ.
A sudden attack by a rabid dog left seven pedestrians seriously injured in Yelandur town, causing widespread panic among the local residents. The dog reportedly attacked people near the Canara Bank area, where some were waiting for buses while others were walking along the roadside. The victims, including Choudamma, Lakshmamma from Y.K. Mole village, and Ratnamma from K. Devarahalli village, suffered severe bite injuries on their hands and legs. Most of the injured are elderly individuals.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm