ಬ್ರೇಕಿಂಗ್ ನ್ಯೂಸ್
07-12-25 10:17 pm HK News Desk ಕರ್ನಾಟಕ
ಚಾಮರಾಜನಗರ, ಡಿ 07 : ಪಾದಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ್ದು, ವೃದ್ಧರು ಸೇರಿದಂತೆ 7 ಮಂದಿ ಗಂಭೀರ ಗಾಯಗೊಂಡ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. ಇದರಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಯಳಂದೂರು ಪಟ್ಟಣದ ಚೌಡಮ್ಮ, ವೈ.ಕೆ.ಮೋಳೆ ಗ್ರಾಮದ ಲಕ್ಷ್ಮಮ್ಮ, ಕೆ.ದೇವರಹಳ್ಳಿ ಗ್ರಾಮದ ರತ್ನಮ್ಮ ಸೇರಿದಂತೆ 7 ಮಂದಿ ಕೈ-ಕಾಲುಗಳಿಗೆ ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ ಪಾದಾಚಾರಿಗಳ ಮೇಲೆ ಎಗರಿಬಿದ್ದಿದೆ. ಅಲ್ಲದೇ, ಕಂಡಕಂಡವರ ಮೇಲೆ ದಾಳಿ ಮಾಡಿ ಪರಾರಿಯಾಗಿದೆ.
ಗಾಯಗೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ.
ಇನ್ನು ಬಾಗಲಕೋಟೆಯಲ್ಲಿ ಶಾಲೆಯಿಂದ ಮರಳುತ್ತಿದ್ದ 5 ವರ್ಷದ ಎಲ್ಕೆಜಿ ವಿದ್ಯಾರ್ಥಿನಿ ಮೇಲೆ ಬೀದ ನಾಯಿ ದಾಳಿ ಮಾಡಿದ ಘಟನೆ ನಡೆದಿದೆ. ಬಾಗಲಕೋಟೆ ನಗರದ ವಿದ್ಯಾಗಿರಿಯ ಬಳಿ ಘಟನೆ ನಡೆದಿದೆ. 5 ವರ್ಷದ ಮಗು ಅನನ್ಯಾ ತೆಗ್ಗಿ ಮೇಲೆ ಬೀದ ನಾಯಿಗಳು ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೊನ್ನೆ ದಾವರಣೆಗೆರೆಯಲ್ಲಿ ರಾಟ್ವೀಲರ್ ನಾಯಿ ದಾಳಿಗೆ ಮಹಿಳೆ ಅನಿತಾ ಎಂಬ ಮಹಿಳೆ ಬಲಿಯಾಗಿದ್ದಾರೆ. ದೇಹದ ಯಾವ ಭಾಗವನ್ನೂ ಬಿಡದೇ ನಾಯಿಗಳು ಕಚ್ಚಿ ಹಾಕಿತ್ತು. ಜನಸಾಮಾನ್ಯರ ದಿನನಿತ್ಯದ ಜೀವನವೇ ಆತಂಕದಲ್ಲಿ ಸಾಗುತ್ತಿದೆ. ಮನೆಗಳ ಮುಂದೆ, ಶಾಲಾ ಮಾರ್ಗಗಳಲ್ಲಿ, ಕಾಲೋನಿ ಬೀದಿಗಳಲ್ಲಿ, ಗಾರ್ಡನ್ಗಳಲ್ಲಿ-ಎಲ್ಲೆಡೆ ನಾಯಿಗಳ ಗುಂಪುಗಳು ಅಲೆದಾಡುತ್ತಿರುವುದು ಇದೀಗ ಸಾಮಾನ್ಯ ದೃಶ್ಯವಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ವಯೋವೃದ್ಧರು ಈ ದಾಳಿಗಳ ಪ್ರಮುಖ ಬಲಿಯಾಗುತ್ತಿರುವುದು ಪ್ರದೇಶದ ಪೋಷಕರಲ್ಲಿ ಹೊಸದೊಂದು ಭೀತಿಯನ್ನು ಹುಟ್ಟಿಸಿದೆ.
A sudden attack by a rabid dog left seven pedestrians seriously injured in Yelandur town, causing widespread panic among the local residents. The dog reportedly attacked people near the Canara Bank area, where some were waiting for buses while others were walking along the roadside. The victims, including Choudamma, Lakshmamma from Y.K. Mole village, and Ratnamma from K. Devarahalli village, suffered severe bite injuries on their hands and legs. Most of the injured are elderly individuals.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm