ಬ್ರೇಕಿಂಗ್ ನ್ಯೂಸ್
07-12-25 10:21 pm HK News Desk ಕರ್ನಾಟಕ
ಗಂಗಾವತಿ, ಡಿ 07 : ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಯುವತಿ ಮತ್ತು ಯುವಕ ಸಾವನ್ನಪ್ಪಿದ ದಾರುಣ ಘಟನೆ ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಕಾರಟಗಿ ತಾಲ್ಲೂಕಿನ ಮುಸ್ಟೂರು ಗ್ರಾಮದವರಾದ ಕವಿತಾ ಮತ್ತು ಇರಕಲ್ಗಡಾದ ಕರಿಯಪ್ಪ ಮಡಿವಾಳ ಅವರ ನಿಶ್ಚಿತಾರ್ಥ ಐದು ತಿಂಗಳ ಹಿಂದೆ ನಡೆದಿತ್ತು. ಡಿಸೆಂಬರ್ 21ರಂದು ಮದುವೆ ನಿಗದಿಯಾಗಿತ್ತು. ಇನ್ನೆರಡು ವಾರದಲ್ಲಿ ಮದುವೆಯಾಗಬೇಕಿದ್ದ ಜೋಡಿ, ಪ್ರಿ ವೆಡ್ಡಿಂಗ್ ಶೂಟಿಂಗ್ಗಾಗಿ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದರು. ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯ ಸೇರಿದಂತೆ ವಿವಿಧೆಡೆ ಸುತ್ತಾಡಿದ್ದರು. ಸಂಜೆಯಾಗುತ್ತಿದ್ದಂತೆ ಕವಿತಾ ಅವರನ್ನು ಮನೆಗೆ ಬಿಟ್ಟು ಬರಲು ಕರಿಯಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಹೋಗುತ್ತಿದ್ದರು. ಈ ವೇಳೆ, ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಹರಿದಿದೆ. ಪರಿಣಾಮ, ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಯುವಕನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿದ್ದಾರೆ.
A young couple from Koppal, set to marry on December 21, lost their lives in a horrific road accident near Dasanal while returning from their pre-wedding shoot. A speeding lorry rammed into their bike, killing the bride-to-be on the spot and leaving the groom fatally injured.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm