ಬ್ರೇಕಿಂಗ್ ನ್ಯೂಸ್
08-12-25 06:58 pm HK News Desk ಕರ್ನಾಟಕ
ಬೆಳಗಾವಿ, ಡಿ.8 : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಕುರ್ಚಿ ಕದನ ಜೋರಾಗಿರುವಾಗಲೇ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಲಾಪಕ್ಕೂ ಮುನ್ನ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಧ್ಯಮಕ್ಕೆ ಮಾತನಾಡಿದರು. ಡಿಸಿಎಂ ಡಿ.ಕೆ ಶಿವಕುಮಾರ್ ತಮಗೊಂದು ಅವಕಾಶ ಕೊಡಿ ಎಂದು ದೆಹಲಿ ನಾಯಕರಲ್ಲಿ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಮಾಡುವಂತಹ ಪರಿಸ್ಥಿತಿ ಈಗ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ನನಗಿದೆ. ದೆಹಲಿಯಲ್ಲಿ ನಡೆದ ಸಭೆಯಲ್ಲು ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ನಾಯಕರು ಸಭೆಗೆ ಕರೆದಿಲ್ಲ ಎಂದೂ ಯತೀಂದ್ರ ಸ್ಪಷ್ಟಪಡಿಸಿದ್ದಾರೆ.
ಅವಿಶ್ವಾಸ ಮಂಡಿಸುವ ಸಾಮರ್ಥ್ಯ ಬಿಜೆಪಿಗಿಲ್ಲ
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸುವ ಕೆಲ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಆ ಪ್ರಯತ್ನಕ್ಕೆ ಕೈಹಾಕಿದರೆ ಮುಖಭಂಗ ಎದುರಿಸುತ್ತಾರೆ. ಆ ಸಾಮರ್ಥ್ಯ ಅವರಿಗೆಲ್ಲಿದೆ. ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಅವರಿಗೆ ಇದು ಗೊತ್ತು. ಅನಗತ್ಯ ರಾಜಕೀಯ ಮಾಡುವ ಬದಲು ಜನರ ವಿಷಯಗಳ ಬಗ್ಗೆ ಚರ್ಚೆ ಮಾಡಲಿ. ಪ್ರತಿಪಕ್ಷವಾಗಿ ಸಮಯವನ್ನು ಸುದುಪಯೋಗ ಮಾಡಿಕೊಳ್ಳುತ್ತಾರೋ ಅಥವಾ ವ್ಯರ್ಥ ಮಾಡುತ್ತಾರೋ ಅವರೇ ನಿರ್ಧರಿಸಲಿ ಎಂದರು.
Amid growing speculation about a power tussle between Karnataka Chief Minister Siddaramaiah and Deputy Chief Minister DK Shivakumar, MLC Yathindra Siddaramaiah, son of the CM, made a startling statement saying the Congress high command has not approved any leadership change in the state.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm