ಬ್ರೇಕಿಂಗ್ ನ್ಯೂಸ್
08-12-25 10:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.8 : ಗ್ಯಾರಂಟಿ ಘೋಷಣೆಗಳ ವಿರುದ್ದ ಸಲ್ಲಿಸಲಾದ ಅರ್ಜಿ ಸಂಬಂಧಿಸಿ ಮುಖ್ಯಮಂತ್ರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಜನ ಎಂಎಲ್ಎಗಳು ಅನರ್ಹವಾಗುವುದು ಖಚಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನಿಂದ ಸಿಎಂ ಸಿದ್ದರಾಮಯ್ಯಗೆ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಆಗಿರುವ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಘೋಷಣೆಯ ಪ್ರಮುಖ ರೂವಾರಿಗಳಾಗಿದ್ದರು. ಗ್ಯಾರಂಟಿಗಳನ್ನ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಭಾಗ್ಯಗಳನ್ನ ಕೊಡುತ್ತಿದ್ದಾರೆ ಎಂದು ಹೈಕೋರ್ಟ್ನಲ್ಲಿ ಎಲೆಕ್ಷನ್ ಪಿಟಿಷನ್ ಸಲ್ಲಿಕೆ ಮಾಡಿದ್ದೆವು ಎಂದು ತಿಳಿಸಿದರು.
ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಿಯಾದ ಅಂಶಗಳ ಮೇಲೆ ಬೆಳಕು ಚೆಲ್ಲದೇ ನಮ್ಮ ಪಿಟಿಷನ್ ವಜಾ ಮಾಡಿದ್ದರು. ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟ್ನಲ್ಲಿ ಅಪೀಲ್ ಫೈಲ್ ಮಾಡಿದ್ದೆವು ಎಂದರು.
ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಇದರಲ್ಲಿ ಹಲವಾರು ತಪ್ಪುಗಳು, ಲೋಪಗಳಿದ್ದು ಪ್ರಕರಣದಲ್ಲಿ ಅಪರಾಧ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಘನ ನ್ಯಾಯಾಲಯದ ನ್ಯಾಯದ ಮುಂದೆ ಯಾವುದೇ ಅಧಿಕಾರ, ಅಂತಸ್ತು ಉಳಿಯುವುದಿಲ್ಲ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಅತೀ ಶೀಘ್ರದಲ್ಲೇ ಉಚಿತ ಗ್ಯಾರೆಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ನಂಬಿಕೆಯಿದೆ. ಎರಡು ವಾರದಲ್ಲಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ಗೆ ಹಾಜರಾಗಬೇಕಿದೆ ಎಂದು ದೇವರಾಜೇಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಕೇಸಿನಲ್ಲಿಯೂ ಗ್ಯಾರಂಟಿ ಯೋಜನೆಗಳ ಔಚಿತ್ಯಗಳ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಲಂಚ ನೀಡಿದ್ದಾರೆಂದು ಆರೋಪಿಸಲಾಗಿದೆ. ವರುಣಾ ಕ್ಷೇತ್ರದ ಮತದಾರ ಕೆ.ಶಂಕರ್ ಸಲ್ಲಿಸಿದ ದೂರನ್ನು ಹೈಕೋರ್ಟಿನಲ್ಲಿ ವಜಾ ಮಾಡಲಾಗಿತ್ತು.
A petition challenging the Congress government’s guarantee schemes has led the Supreme Court to issue summons to Karnataka Chief Minister Siddaramaiah, requiring his personal appearance. BJP leader and advocate Devarajegowda claimed that this development could lead to the disqualification of all 224 MLAs, arguing that the free guarantees announced during the 2023 elections amounted to offering inducements to voters.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm