ಬ್ರೇಕಿಂಗ್ ನ್ಯೂಸ್
10-12-25 12:58 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10 : ರಾಜ್ಯ ಕಾಂಗ್ರೆಸಿನಲ್ಲಿ ಅಧಿಕಾರ ಹಂಚಿಕೆಯ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅಧಿಕಾರ ಹಂಚಿಕೆಯ ಸೂಕ್ಷ್ಮ ವಿಷಯದ ಬಗ್ಗೆ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳ ಮುಂದೆ ಶಾಸಕರು ತಮ್ಮ ಮನಸೋ ಇಚ್ಛೆ ಹೇಳಿಕೆಗಳನ್ನು ನೀಡುವುದರಿಂದ ಪಕ್ಷ ಮತ್ತು ಸರ್ಕಾರದೊಳಗೆ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಎಚ್ಚರಿಕೆ ನೀಡಲಾಗಿದ್ದು, ಅಧಿಕಾರ ಹಂಚಿಕೆ ವ್ಯವಸ್ಥೆಗಳ ಬಗ್ಗೆ ಚರ್ಚಿಸುವುದನ್ನು ನಿಲ್ಲಿಸಿ. ಸಡಿಲ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲ ಸೃಷ್ಟಿಸಬೇಡಿ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಎದುರಿಸಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ನಾಯಕತ್ವದ ಪ್ರಶ್ನೆ ಸಾರ್ವಜನಿಕ ಪ್ರದರ್ಶನವಾಗಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸಭೆಯಲ್ಲಿದ್ದ ಮೂಲಗಳು ತಿಳಿಸಿವೆ. ವಿಶೇಷವಾಗಿ ವಿರೋಧ ಪಕ್ಷಗಳು ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿರುವಾಗ ಆಡಳಿತ ಪಕ್ಷದಲ್ಲಿ ಶಿಸ್ತು ಮತ್ತು ಏಕತೆ ನಿರ್ಣಾಯಕವಾಗಿರುತ್ತದೆ ಎಂದು ಶಾಸಕರಿಗೆ ಬುದ್ದಿಮಾತು ಹೇಳಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ನೊಳಗೆ ಯಾವುದೇ ಆಂತರಿಕ ಕಲಹ ಇಲ್ಲ ಎಂದು ವದಂತಿ ತಳ್ಳಿಹಾಕಿದ ಮಾಜಿ ಸಚಿವ ಕೆ.ಎನ್. ರಾಜಣ್ಣ, ಶಾಸಕಾಂಗ ಸಭೆಯು ಪ್ರಾದೇಶಿಕ ಸಮಸ್ಯೆಗಳು ಮತ್ತು ಮುಂಬರುವ ಸದನದ ಕಾರ್ಯತಂತ್ರದ ಮೇಲೆ ಕೇಂದ್ರೀಕರಿಸಿತ್ತು ಹೊರತು ರಾಜಕೀಯ ಚರ್ಚೆಗಳಾಗಿಲ್ಲ ಎಂದರು. ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆಗಳು ಮತ್ತು ನಮ್ಮ ಸದಸ್ಯರು ಅವುಗಳನ್ನು ಶಾಸಕಾಂಗದಲ್ಲಿ ಹೇಗೆ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಬೇಕು ಎಂಬುದರ ಕುರಿತು ಚರ್ಚಿಸಿದ್ದೇವೆ. ಸದನದೊಳಗೆ ವಿರೋಧ ಪಕ್ಷದವರನ್ನು ಹೇಗೆ ಎದುರಿಸುವುದು ಮತ್ತು ಪ್ರತಿಕ್ರಿಯಿಸುವುದು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರು ಮತ್ತು ಶಾಸಕರಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡಿದರು ಎಂದು ರಾಜಣ್ಣ ಹೇಳಿದರು.
As the debate over power-sharing intensifies within the Karnataka Congress, Chief Minister Siddaramaiah has strictly warned party MLAs against making any public remarks on the sensitive issue. Addressing the Congress Legislature Party meeting, the CM cautioned that off-the-cuff statements to the media create unnecessary confusion within the party and government.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm