ಬ್ರೇಕಿಂಗ್ ನ್ಯೂಸ್
10-12-25 09:40 pm HK News Desk ಕರ್ನಾಟಕ
ಬೆಳಗಾವಿ, ಡಿ.10: ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನ ಹೊಣೆಯಾಗಿಸಿ ತಕ್ಷಣ ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ಆರ್ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗುವುದು ಎಂದರು.
ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡಿ, ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕಲ್ ಬಸ್ಗಳ ಹಂಚಿಕೆಗೆ ಕುರಿತ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್ಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡ ವಿಧಿಸಲಾಗಿದೆ ಎಂದರು.
2023 ಜನವರಿಯಿಂದ ಇಲ್ಲಿಯವರೆಗೆ ಕಾರ್ಯಾಚರಣೆ ಸಮಯದಲ್ಲಿ ಆಕಸ್ಮಿಕವಾಗಿ ವಿವಿಧ ಕಾರಣಗಳಿಂದ ಒಟ್ಟು 477 ಬಾರಿ ಬಸ್ಸುಗಳಿಗೆ ಅವಘಡ ಸಂಭವಿಸಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ. ಬಿಎಂಟಿಸಿಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 1,221 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಯಲ್ಲಿರುತ್ತವೆ. 2023-24 ರಿಂದ 2025 ಸೆಪ್ಟಂಬರ್ ವರೆಗೆ ಬ್ಯಾಟರಿ ದೋಷಗಳಿಂದ 14,082 ಬಾರಿ ಹಾಗೂ ಇನ್ನಿತರ ದೋಷದಿಂದ 2049 ಬಾರಿ ಅಪಘಾತಕ್ಕೀಡಾಗಿರುತ್ತವೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಂಪನಿಯವರು ಈ ಬಸ್ಸುಗಳನ್ನು ದುರಸ್ತಿಗೊಳಿಸಿ ಕಾರ್ಯಾಚರಣೆಗೆ ನೀಡಿದ್ದಾರೆ ಎಂದು ಹೇಳಿದರು.
Transport Minister Ramalinga Reddy has issued a strict warning that officials will be held directly responsible and immediately suspended if middlemen are found operating in any RTO office across the state.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am