ಬ್ರೇಕಿಂಗ್ ನ್ಯೂಸ್
11-12-25 03:29 pm HK News Desk ಕರ್ನಾಟಕ
ಪಡುಬಿದ್ರಿ, ಡಿ.11 : ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಗುರುವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ ಏಳು ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳಾ ಕಾರ್ಮಿಕರಿದ್ದರು. ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.
ಮಗುಚಿ ಬಿದ್ದ ಟೆಂಪೋದ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಯಿತು. ಒಬ್ಬ ಮಹಿಳೆ ಯಂತ್ರದ ಅಡಿಗೆ ಸಿಲುಕಿದ್ದು ಅವರನ್ನು ಹೊರತೆಗೆಯಲು ಹರಸಾಹಸಪಟ್ಟರು. ಹೆಜಮಾಡಿ ಟೋಲ್ ಅಂಬುಲೆನ್ಸ್ ಮತ್ತು ಕ್ರೇನ್ ತಕ್ಷಣ ಆಗಮಿಸಿ ಮಹಿಳೆಯನ್ನು ಹೊರ ತೆಗೆದಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಟೋಲ್ ಅಂಬುಲೆನ್ಸ್ ಮೂಲಕ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A tragic accident occurred near the Hejamady Kannangaru Brahmabaidarkala Garadi on National Highway 66 on Thursday morning when a tempo transporting workers for concrete work overturned after a tyre burst. One woman died and several others were injured.
10-01-26 03:00 pm
HK News Desk
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm