ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜೈಲು ಸಿಬಂದಿಗೇ ಬಿತ್ತು ಏಟು, ಟಿವಿ ಇನ್ನಿತರ ಉಪಕರಣ ಪುಡಿ ಪುಡಿ, ಮಂಗಳೂರಿನ ರೌಡಿಗಳ ಅಟ್ಟಹಾಸ ! 

11-12-25 08:03 pm       HK News Desk   ಕರ್ನಾಟಕ

ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ.‌ ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ. 

ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ.‌ ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ. 

ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ‌ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು. 

ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು.‌ ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.‌

ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು.‌ ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.

A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.