ಬ್ರೇಕಿಂಗ್ ನ್ಯೂಸ್
11-12-25 08:03 pm HK News Desk ಕರ್ನಾಟಕ
ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.




ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.
A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am