ಬ್ರೇಕಿಂಗ್ ನ್ಯೂಸ್
11-12-25 10:57 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12 : ಕಳೆದ ಎರಡು ವರ್ಷಗಳಲ್ಲಿ (2023 ರಿಂದ 2025 ನವೆಂಬರ್ ವರೆಗೆ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹೆಲಿಕಾಪ್ಟರ್ ಪ್ರಯಾಣದ ವೆಚ್ಚವು 47 ಕೋಟಿ ರೂ. ಆಗಿದೆ. ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಪ್ರಶ್ನೆಗೆ ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಈ ಮಾಹಿತಿ ನೀಡಿದ್ದಾರೆ.
ಎರಡೂವರೆ ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ಯಾವ ವಿಮಾನಗಳನ್ನು ಬಾಡಿಗೆಗೆ ಪಡೆದಿದ್ದಾರೆ ಎಂಬ ವಿವರಗಳನ್ನು ರವಿಕುಮಾರ್ ತಮ್ಮ ಪ್ರಶ್ನೆಯಲ್ಲಿ ಕೇಳಿದ್ದರು. ಮುಖ್ಯಮಂತ್ರಿ ಮತ್ತು ಮುಖ್ಯ ನ್ಯಾಯಮೂರ್ತಿಗಳಿಗೆ ಸಾರ್ವಜನಿಕ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪಾರದರ್ಶಕತೆ ಕಾಯ್ದೆಯ ನಿಬಂಧನೆಗಳಿಂದ ವಿನಾಯಿತಿ ನೀಡಲಾಗಿದೆ. ಎರಡೂವರೆ ವರ್ಷದಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ತಮ್ಮ ಹುಟ್ಟೂರಾದ ಮೈಸೂರಿಗೆ ವಿಮಾನದಲ್ಲಿ ಬರಲು 5 ಕೋಟಿ ಹೆಚ್ಚು ಖರ್ಚು ಮಾಡಿದ್ದಾರೆ. ಮೈಸೂರಿಗೆ ರಸ್ತೆ ಮೂಲಕ ತೆರಳಿದರೆ ಕೇವಲ 2 ಗಂಟೆಗಳಲ್ಲಿ ತೆರಳಬಹುದು. ಆದರೂ ಮೈಸೂರಿಗೆ ಅವರು 22 ಬಾರಿ ವಿಮಾನದಲ್ಲಿಯೇ ತೆರಳಿದ್ದಾರೆ. ಒಂದು ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಬೆಂಗಳೂರು-ಮೈಸೂರು ವಿಮಾನ ಪ್ರಯಾಣಕ್ಕೆ 23.18 ಲಕ್ಷ ರೂ. ವೆಚ್ಚ ಆಗಿದೆ.
180 ಬಾರಿ ವಿಮಾನ, ಹೆಲಿಕಾಪ್ಟರ್ ಬುಕ್ಕಿಂಗ್
ಸಿದ್ದರಾಮಯ್ಯ ನವದೆಹಲಿ, ಹೈದರಾಬಾದ್ ಮತ್ತು ಚೆನ್ನೈಗೆ ವಿಮಾನದಲ್ಲಿ ತೆರಳಿರುವ ಮಾಹಿತಿ ನೀಡಲಾಗಿದೆ. ಅಂಕಿ ಅಂಶಗಳ ಪ್ರಕಾರ, ಸಿದ್ದರಾಮಯ್ಯ ಸರಾಸರಿ ಐದು ದಿನಗಳಿಗೊಮ್ಮೆ ಹೆಲಿಕಾಪ್ಟರ್ ಅಥವಾ ವಿಶೇಷ ವಿಮಾನವನ್ನು ಬುಕ್ ಮಾಡುತ್ತಾರೆ. ಈ ಬಾರಿ ಅವರು 180 ಬಾರಿ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳನ್ನು ಬುಕ್ ಮಾಡಿದ್ದಾರೆ.
2023-24ರಲ್ಲಿ ಸಿದ್ದರಾಮಯ್ಯ 48 ಬಾರಿ ವಿಮಾನ ಯಾನ ಮಾಡಿದ್ದು, ಇದಕ್ಕೆ 12.23 ಕೋಟಿ ರೂ. ವೆಚ್ಚ ಆಗಿದೆ. 2024-25ರಲ್ಲಿ 84 ಬಾರಿ ವಿಮಾನದಲ್ಲಿ ತೆರಳಿದ್ದು, ಅದಕ್ಕೆ 20.88 ಕೋಟಿ ರೂ. ವೆಚ್ಚವಾಗಿತ್ತು. ಈ ಹಣಕಾಸು ವರ್ಷದಲ್ಲಿ 48 ಬಾರಿ ವಿಮಾನ ಮತ್ತು ಹೆಲಿಕಾಪ್ಟರ್ಗಳನ್ನು ಬುಕ್ ಮಾಡಲಾಗಿದ್ದು, 14.03 ಕೋಟಿ ರೂ. ವೆಚ್ಚವಾಗಿದೆ. 181 ಬುಕಿಂಗ್ಗಳಲ್ಲಿ 180 ಜಿಎಂಪಿ ಏರ್ ಚಾರ್ಟರ್ಗಳ ಮೂಲಕ ಆಗಿದೆ. ಉಳಿದದ್ದು ಗೋಜೆಟ್ಸ್ ಏವಿಯೇಷನ್ನಿಂದ ಬುಕ್ ಆಗಿದೆ. ಸಿಎಂ ಅಧಿಕೃತ ಭೇಟಿಗೆ ಮಾತ್ರ ವಿಶೇಷ ವಿಮಾನ, ವಿಮಾನ, ಹೆಲಿಕಾಪ್ಟರ್ ಬಳಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
Karnataka Chief Minister Siddaramaiah has incurred a total expenditure of ₹47 crore on helicopter and special flight travel over the past two years (from 2023 to November 2025). The information was revealed by the CM himself — who also holds the Finance portfolio — in response to a question raised by BJP MLC Ravi Kumar during the Belagavi Assembly session.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm