ಬ್ರೇಕಿಂಗ್ ನ್ಯೂಸ್
12-12-25 03:18 pm HK News Desk ಕರ್ನಾಟಕ
ಬೆಳಗಾವಿ, ಡಿ.12 : ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.
ಬೆಳಗಾವಿಯಲ್ಲಿ ನಿನ್ನೆ ನಡೆದ ಡಿ.ಕೆ.ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ ಎಂದರು. ಅದೊಂದು ಸೌಹಾರ್ದ ಭೋಜನ ಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲದಕ್ಕೂ ಹಣೆ ಬರಹವೇ ಮುಖ್ಯ. ಅವಕಾಶ ಸಿಗದಿದ್ದರೆ ಹಣೆ ಬರಹಕ್ಕೆ ಹೊಣೆ ಯಾರು? ಭಗವಂತ ಏನು ಬರೆದಿದ್ದಾನೋ ಅದು ಆಗುತ್ತದೆ ಎಂದರು.
ಡಿಕೆ ಶಿವಕುಮಾರ್ ಅವರ ಹೋರಾಟ, ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಾವು ನಮ್ಮ ಅಭಿಪ್ರಾಯಗಳನ್ನು ಈಗಾಗಲೇ ಹೈಕಮಾಂಡ್ ನಾಯಕರ ಮುಂದೆ ಹೇಳಿದ್ದೇವೆ. ವರಿಷ್ಠರು ಕರೆದರೆ ನಾವು ಮತ್ತೊಮ್ಮೆ ದೆಹಲಿಗೆ ಹೋಗುತ್ತೇವೆ ಎಂದರು.
Congress MLA Iqbal Hussain has claimed that Deputy Chief Minister D.K. Shivakumar will take over as the Chief Minister of Karnataka immediately after the Belagavi winter session concludes. Speaking to reporters in Belagavi on Friday morning, the Ramanagara MLA said, “As soon as the session ends, D.K. Shivakumar will be given the Chief Minister’s post.”
12-12-25 03:18 pm
HK News Desk
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವ...
11-12-25 10:57 pm
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 02:02 pm
Mangalore Correspondent
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm