ಬ್ರೇಕಿಂಗ್ ನ್ಯೂಸ್
12-12-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.
ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್ನಲ್ಲಿ ಸಾಕಿದ್ದರು. ಇಂದು ಅಪಾರ್ಟ್ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್ ಕುಮಾರ್, ಕಬ್ಬಿಣದ ಪೈಪ್ಗೆ ಕಟ್ಟಿಗೆ ಸೇರಿಸಿ ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.
In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits. The deceased has been identified as Arun Kumar (32).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm