ಬ್ರೇಕಿಂಗ್ ನ್ಯೂಸ್
12-12-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.
ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್ನಲ್ಲಿ ಸಾಕಿದ್ದರು. ಇಂದು ಅಪಾರ್ಟ್ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್ ಕುಮಾರ್, ಕಬ್ಬಿಣದ ಪೈಪ್ಗೆ ಕಟ್ಟಿಗೆ ಸೇರಿಸಿ ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.
In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits. The deceased has been identified as Arun Kumar (32).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am