Pet Parrot, Bangalore Youth Death: 2 ಲಕ್ಷ ರೂ. ಗಿಳಿಯನ್ನ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬೆಂಗಳೂರಿನ ಯುವಕ, ಗಿಳಿ ಪರಾರಿ ! 

12-12-25 08:47 pm       Bangalore Correspondent   ಕರ್ನಾಟಕ

ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.

ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.

ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್‌ನಲ್ಲಿ ಸಾಕಿದ್ದರು. ಇಂದು ಅಪಾರ್ಟ್‌ಮೆಂಟ್‌ ಆವರಣದಲ್ಲಿರುವ ಹೈಟೆನ್ಷನ್ ವೈರ್​ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್​ ಕುಮಾರ್,​ ಕಬ್ಬಿಣದ ಪೈಪ್‌ಗೆ ಕಟ್ಟಿಗೆ ಸೇರಿಸಿ ಅಪಾರ್ಟ್‌ಮೆಂಟ್​ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್​​ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್‌ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್​ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.

In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits.  The deceased has been identified as Arun Kumar (32).